‘2021ರಲ್ಲಿ ಆಗ್ನಿಶಾಮಕ ಠಾಣೆಗೆ ಒಟ್ಟು 803 ಕರೆಗಳು ಬಂದಿದ್ದರೆ, 2022ರ ಮೇ ವರೆಗೆ 418 ಕರೆಗಳು ಬಂದಿವೆ. ಕಳೆದ ವರ್ಷ 22 ಹಾಗೂ ಈ ವರ್ಷ 14 ಜನರ ಜೀವ ರಕ್ಷಣೆ ಮಾಡಲಾಗಿದೆ. ಕಳೆದ ವರ್ಷ ₹ 8,22,88,000 ಮೌಲ್ಯದ ಆಸ್ತಿ ರಕ್ಷಣೆ ಮಾಡಿದರೆ, ಪ್ರಸಕ್ತ ₹ 34,03,95,000 ಮೌಲ್ಯದ ಆಸ್ತಿ ರಕ್ಷಣೆ ಮಾಡಲಾಗಿದೆ. ಎರಡು ವರ್ಷಗಳ ಅವಧಿಯಲ್ಲಿ 74 ಜಾಗೃತಿ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಿಗೆ ಅಗ್ನಿ ಅನಾಹುತಗಳ ತಿಳಿವಳಿಕೆ ನೀಡಲು ಪ್ರಯತ್ನಿಸಲಾಗಿದೆ’ ಎಂದು ಜಿಲ್ಲಾ ಅಗ್ನಿ ಶಾಮಕ ಆಧಿಕಾರಿ ಮುಜಮಿಲ್ ಹೇಳುತ್ತಾರೆ.