‘ಠಾಣಾಧಿಕಾರಿ ಕೊಳವೆಬಾವಿ ದುರಸ್ತಿ ಮಾಡಿಸುವಂತೆ ಒಂದು ವರ್ಷದಲ್ಲಿ ಮೂರು–ನಾಲ್ಕು ಬಾರಿ ಪುರಸಭೆಗೆ ಮನವಿ ಸಲ್ಲಿಸಿದ್ದಾರೆ. ನಿರ್ಲಕ್ಷ್ಯ ಮಾಡುತ್ತಿರುವುದು ಎಷ್ಟು ಸರಿ? ತಕ್ಷಣ ಮೋಟಾರ್ ದುರಸ್ತಿ ಮಾಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪುರಸಭೆ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಜಯ ಕರ್ನಾಟಕ ಜನಪರ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ವಿಶಾಲ ಧೊಮಾಳೆ ಎಚ್ಚರಿಕೆ ನೀಡಿದ್ದಾರೆ.