ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀನು ಸಾಕಾಣಿಕೆ ತರಬೇತಿ ಇಂದು

Last Updated 9 ಜುಲೈ 2021, 13:53 IST
ಅಕ್ಷರ ಗಾತ್ರ

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಕೆ.ವಿ.ಕೆ ಕೃಷಿ ಪಾಠಶಾಲೆ ಸರಣಿ ಕಾರ್ಯಕ್ರಮದಲ್ಲಿ ಶನಿವಾರ (ಜು.10) ಬೆಳಿಗ್ಗೆ 11ಕ್ಕೆ ವೈಜ್ಞಾನಿಕ ಮೀನು ಸಾಕಾಣಿಕೆ ಮತ್ತು ಮೀನುಗಾರಿಕೆ ಇಲಾಖೆ ಯೋಜನೆಗಳ ಕುರಿತು ರೈತರಿಗೆ ಆನ್‍ಲೈನ್‍ನಲ್ಲಿ ತರಬೇತಿ ಹಮ್ಮಿಕೊಂಡಿದೆ.

ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಡಾ. ಮಲ್ಲೇಶ ಬಿ. ಮೀನು ಸಾಕಾಣಿಕೆ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ ತಿಳಿಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಒಳನಾಡು ಮೀನುಗಾರಿಕೆ ಲಾಭದಾಯಕ ಉದ್ಯಮವಾಗಿ ಜನಪ್ರಿಯತೆ ಪಡೆಯುತ್ತಿದೆ. ಕಡಿಮೆ ವೆಚ್ಚದಲ್ಲಿ ಒಂದೇ ಜಾತಿ ಅಥವಾ ಮಿಶ್ರ ಮೀನು ಸಾಕಾಣಿಕೆ ಕೈಗೊಳ್ಳಬಹುದು ಎಂದು ಹೇಳಿದ್ದಾರೆ.

ಸ್ವದೇಶಿ ಮೀನುಗಳ ಜತೆಗೆ ವಿದೇಶಿ ಮೀನುಗಳನ್ನೂ ವಿವಿಧ ಅನುಪಾತದಲ್ಲಿ ಸಾಕಬಹುದು. ಒಂದೇ ಹೊಂಡದಲ್ಲಿ ಮೇಲು ಪದರು, ಮಧ್ಯದ ಪದರು ಹಾಗೂ ಕೆಳ ಪದರುಗಳಲ್ಲಿ ಏಕಕಾಕಕ್ಕೆ ವಿವಿಧ ಜಾತಿಯ ಮೀನುಗಳನ್ನು ಸಾಕಬಹುದು ಎಂದು ತಿಳಿಸಿದ್ದಾರೆ.

ಮೀನುಗಾರಿಕೆಗೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ ರೈತರು ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. ಗೂಗಲ್ ಮೀಟ್ ಲಿಂಕ್ meet.google.com/zpz-msoq-vsi ಬಳಸಿ ತರಬೇತಿಯಲ್ಲಿ ಪಾಲ್ಗೊಳ್ಳಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT