ಸಂಜೆ ನಡೆದ ಬಹಿರಂಗ ಅಧಿವೇಶನದಲ್ಲಿ ಒಟ್ಟು ಐದು ನಿರ್ಣಯಗಳನ್ನು ಅಂಗೀಕರಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿಗೆ ನೀಡಲಾದ ಬೀದರ್ ಕನ್ನಡ ಭವನವನ್ನು
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಮರಳಿ ಪಡೆಯುವ ಪ್ರಯತ್ನವನ್ನು ನಿಲ್ಲಿಸಿ ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಇರುವಂತೆ ಕನ್ನಡ ಭವನ ಕನ್ನಡ ಸಾಹಿತ್ಯ ಪರಿಷತ್ತಿನ ಸುಪರ್ದಿನಲ್ಲಿರಬೇಕೆಂದು ನಿರ್ಣಯ ಅಂಗೀಕರಿಸಲಾಯಿತು. ವಿಜಯಕುಮಾರ ಸೋನಾರೆ ಓದಿದರೆ, ಬಾಬುರಾವ ದಾನಿ ಅನುಮೋದಿಸಿದರು.