<p><strong>ಬೀದರ್:</strong> ಬೀದರ್ ನಗರಸಭೆ ಕಚೇರಿಯಲ್ಲಿ ಇಂಟರ್ನೆಟ್ ನೆಟ್ವರ್ಕ್ ಸಮಸ್ಯೆ ಪರಿಹರಿಸಬೇಕು ಎಂದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್ ಆಗ್ರಹಿಸಿದ್ದಾರೆ.</p>.<p>ನಗರಸಭೆ ಕಚೇರಿಯಲ್ಲಿ ದಿನದಲ್ಲಿ ಹತ್ತಾರು ಬಾರಿ ಇಂಟರ್ನೆಟ್ ನೆಟ್ವರ್ಕ್ ಕೈಕೊಡುತ್ತಿದೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಗಂಟೆಗಟ್ಟಲೇ ಕಾಯಬೇಕಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ನಾಗರಿಕರು ನಿವೇಶನ ಖಾತಾ, ನಿವೇಶನ, ಮನೆ, ನಲ್ಲಿ ಕರ ಪಾವತಿಗೆ ಒಂದು ತಿಂಗಳಿಂದ ಇಂಟರ್ನೆಟ್ ನೆಟ್ವರ್ಕ್ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.</p>.<p>ಆಧುನಿಕ ಯುಗದಲ್ಲಿ ಆನ್ಲೈನ್ನಲ್ಲೇ ಹೆಚ್ಚು ಕೆಲಸಗಳು ನಡೆಯುತ್ತಿವೆ. ನಗರಸಭೆಯಲ್ಲಿ ವಿದ್ಯುತ್ ಕೈಕೊಟ್ಟರೂ ಆನ್ಲೈನ್ ಕೆಲಸಗಳು ಸ್ಥಗಿತಗೊಳ್ಳುತ್ತಿವೆ. ಇನ್ವರ್ಟರ್ ಸುಸ್ಥಿತಿಯಲ್ಲಿ ಇಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.</p>.<p>ನಗರಸಭೆ ಆಯುಕ್ತರು ಕಚೇರಿ ಕಾರ್ಯಗಳು ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ನಗರದಲ್ಲಿ ಮಳೆಯಿಂದ ತಗ್ಗು ದಿನ್ನೆಗಳು ಸೃಷ್ಟಿಯಾಗಿರುವ ರಸ್ತೆಗಳನ್ನು ದುರಸ್ತಿಪಡಿಸಬೇಕು. ಚರಂಡಿಗಳನ್ನು ಶುಚಿಗೊಳಿಸಬೇಕು. ಬಡಾವಣೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬೀದರ್ ನಗರಸಭೆ ಕಚೇರಿಯಲ್ಲಿ ಇಂಟರ್ನೆಟ್ ನೆಟ್ವರ್ಕ್ ಸಮಸ್ಯೆ ಪರಿಹರಿಸಬೇಕು ಎಂದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್ ಆಗ್ರಹಿಸಿದ್ದಾರೆ.</p>.<p>ನಗರಸಭೆ ಕಚೇರಿಯಲ್ಲಿ ದಿನದಲ್ಲಿ ಹತ್ತಾರು ಬಾರಿ ಇಂಟರ್ನೆಟ್ ನೆಟ್ವರ್ಕ್ ಕೈಕೊಡುತ್ತಿದೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗಾಗಿ ಗಂಟೆಗಟ್ಟಲೇ ಕಾಯಬೇಕಾಗಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ನಾಗರಿಕರು ನಿವೇಶನ ಖಾತಾ, ನಿವೇಶನ, ಮನೆ, ನಲ್ಲಿ ಕರ ಪಾವತಿಗೆ ಒಂದು ತಿಂಗಳಿಂದ ಇಂಟರ್ನೆಟ್ ನೆಟ್ವರ್ಕ್ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.</p>.<p>ಆಧುನಿಕ ಯುಗದಲ್ಲಿ ಆನ್ಲೈನ್ನಲ್ಲೇ ಹೆಚ್ಚು ಕೆಲಸಗಳು ನಡೆಯುತ್ತಿವೆ. ನಗರಸಭೆಯಲ್ಲಿ ವಿದ್ಯುತ್ ಕೈಕೊಟ್ಟರೂ ಆನ್ಲೈನ್ ಕೆಲಸಗಳು ಸ್ಥಗಿತಗೊಳ್ಳುತ್ತಿವೆ. ಇನ್ವರ್ಟರ್ ಸುಸ್ಥಿತಿಯಲ್ಲಿ ಇಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.</p>.<p>ನಗರಸಭೆ ಆಯುಕ್ತರು ಕಚೇರಿ ಕಾರ್ಯಗಳು ಸುಸೂತ್ರವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ನಗರದಲ್ಲಿ ಮಳೆಯಿಂದ ತಗ್ಗು ದಿನ್ನೆಗಳು ಸೃಷ್ಟಿಯಾಗಿರುವ ರಸ್ತೆಗಳನ್ನು ದುರಸ್ತಿಪಡಿಸಬೇಕು. ಚರಂಡಿಗಳನ್ನು ಶುಚಿಗೊಳಿಸಬೇಕು. ಬಡಾವಣೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>