<p><strong>ಹೊನ್ನಿಕೇರಿ(ಜನವಾಡ):</strong> ಬೀದರ್ ತಾಲ್ಲೂಕಿನ ಹೊನ್ನಿಕೇರಿ ಗ್ರಾಮದಲ್ಲಿ ವಿಜಯದಶಮಿ ಪ್ರಯುಕ್ತ ಗುರುವಾರ ಧ್ವಜ ಉತ್ಸವ ಜರುಗಿತು.</p>.<p>ಉತ್ಸವದ ಅಂಗವಾಗಿ ಗ್ರಾಮದ ಸಿದ್ಧೇಶ್ವರ ದೇವಸ್ಥಾನದ ಪೀಠಾಧಿಕಾರಿ ಅವರ ಮನೆಯಿಂದ ಸಿದ್ಧೇಶ್ವರ ದೇವಸ್ಥಾನದ ವರೆಗೆ ಧ್ವಜದ ಮೆರವಣಿಗೆ ನಡೆಯಿತು.</p>.<p>ನಂತರ ಹುಣಸೆ ಮತ್ತು ಆಲದ ಮರಗಳಿಗೆ ಧ್ವಜ ಕಟ್ಟಿ, ಸಿದ್ಧೇಶ್ವರ ಹಾಗೂ ಮಲ್ಲಿಕಾರ್ಜುನ ದೇವರಿಗೆ ನೈವೇದ್ಯ ಸಮರ್ಪಣೆ ಮಾಡಲಾಯಿತು.</p>.<p>‘ಗ್ರಾಮದಲ್ಲಿ ಹಿಂದಿನಿಂದಲೂ ಧ್ವಜ ಉತ್ಸವ ಮಾಡುತ್ತಾ ಬರಲಾಗಿದೆ. ಸಿದ್ಧೇಶ್ವರ ದೇವಸ್ಥಾನದ ಪೀಠಾಧಿಕಾರಿಯಾಗಿದ್ದ ಸಿದ್ಧಲಿಂಗಯ್ಯ ಸ್ವಾಮಿ ಪೂಜಾರಿ ಅವರ ನಿಧನದ ನಂತರ ಅವರ ಕಿರಿಯ ಪುತ್ರ ನಾಗಯ್ಯ ಸ್ವಾಮಿ ಉತ್ಸವ ಮುಂದುವರಿಸಿಕೊಂಡು ಬರುತ್ತಿದ್ದಾರೆ’ ಎಂದು ಪ್ರಶಾಂತಯ್ಯ ಸ್ವಾಮಿ ಹೇಳಿದರು.</p>.<p>ಸಿದ್ಧೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸಿದ್ಧಯ್ಯ ಸ್ವಾಮಿ, ಪ್ರಮುಖರಾದ ನಾಗಯ್ಯ ಸ್ವಾಮಿ, ರಾಜಕುಮಾರ ಬಾಬಯ್ಯ, ಶ್ರೀಕಾಂತಯ್ಯ, ಗುರುಶಾಂತಯ್ಯ, ಆಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಿಕೇರಿ(ಜನವಾಡ):</strong> ಬೀದರ್ ತಾಲ್ಲೂಕಿನ ಹೊನ್ನಿಕೇರಿ ಗ್ರಾಮದಲ್ಲಿ ವಿಜಯದಶಮಿ ಪ್ರಯುಕ್ತ ಗುರುವಾರ ಧ್ವಜ ಉತ್ಸವ ಜರುಗಿತು.</p>.<p>ಉತ್ಸವದ ಅಂಗವಾಗಿ ಗ್ರಾಮದ ಸಿದ್ಧೇಶ್ವರ ದೇವಸ್ಥಾನದ ಪೀಠಾಧಿಕಾರಿ ಅವರ ಮನೆಯಿಂದ ಸಿದ್ಧೇಶ್ವರ ದೇವಸ್ಥಾನದ ವರೆಗೆ ಧ್ವಜದ ಮೆರವಣಿಗೆ ನಡೆಯಿತು.</p>.<p>ನಂತರ ಹುಣಸೆ ಮತ್ತು ಆಲದ ಮರಗಳಿಗೆ ಧ್ವಜ ಕಟ್ಟಿ, ಸಿದ್ಧೇಶ್ವರ ಹಾಗೂ ಮಲ್ಲಿಕಾರ್ಜುನ ದೇವರಿಗೆ ನೈವೇದ್ಯ ಸಮರ್ಪಣೆ ಮಾಡಲಾಯಿತು.</p>.<p>‘ಗ್ರಾಮದಲ್ಲಿ ಹಿಂದಿನಿಂದಲೂ ಧ್ವಜ ಉತ್ಸವ ಮಾಡುತ್ತಾ ಬರಲಾಗಿದೆ. ಸಿದ್ಧೇಶ್ವರ ದೇವಸ್ಥಾನದ ಪೀಠಾಧಿಕಾರಿಯಾಗಿದ್ದ ಸಿದ್ಧಲಿಂಗಯ್ಯ ಸ್ವಾಮಿ ಪೂಜಾರಿ ಅವರ ನಿಧನದ ನಂತರ ಅವರ ಕಿರಿಯ ಪುತ್ರ ನಾಗಯ್ಯ ಸ್ವಾಮಿ ಉತ್ಸವ ಮುಂದುವರಿಸಿಕೊಂಡು ಬರುತ್ತಿದ್ದಾರೆ’ ಎಂದು ಪ್ರಶಾಂತಯ್ಯ ಸ್ವಾಮಿ ಹೇಳಿದರು.</p>.<p>ಸಿದ್ಧೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸಿದ್ಧಯ್ಯ ಸ್ವಾಮಿ, ಪ್ರಮುಖರಾದ ನಾಗಯ್ಯ ಸ್ವಾಮಿ, ರಾಜಕುಮಾರ ಬಾಬಯ್ಯ, ಶ್ರೀಕಾಂತಯ್ಯ, ಗುರುಶಾಂತಯ್ಯ, ಆಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>