ಬಿಜೆಪಿ ನಾಯಕ ಡಿ.ಕೆ.ಸಿದ್ರಾಮ ಮತ್ತು ಮಾಜಿ ಶಾಸಕ ಪ್ರಕಾಶ ಖಂಡ್ರೆ ಅವರು ತಾಲ್ಲೂಕಿನಲ್ಲಿ ವ್ಯಾಪಕ ಮಳೆ ಆದ ಹಿನ್ನೆಲೆಯಲ್ಲಿ ರೈತರು ಬೆಳೆದ ಎಲ್ಲ ಬೆಳೆಗಳು ನಾಶವಾಗಿವೆ ಸಾಲಸೋಲ ಮಾಡಿ ಬಿತ್ತನೆ ಮಾಡಿದ ರೈತರು ಸಂಕಷ್ಟದಲ್ಲಿ ದಿನದೂಡುತ್ತಿದ್ದಾರೆ. ಎಲ್ಲ ರೈತರಿಗೂ ಸೂಕ್ತ ಪರಿಹಾರ ಕೊಡುವಂತೆ ಕ್ರಮ ವಹಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು. ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಶಾಂತವೀರ ಕೇಸ್ಕರ್, ಶಿವರಾಜ ಗಂದಗೆ, ಜನಾರ್ಧನ ಬಿರಾದಾರ, ಪಂಡಿತ ಶಿರೋಳೆ, ತಹಶೀಲ್ದಾರ್ ಕೀರ್ತಿ ಚಾಲಕ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್ ಇದ್ದರು.