<p><strong>ಬೀದರ್</strong>: ಜಿಲ್ಲೆಯ ಹುಲಸೂರ, ಕಮಲನಗರ ಹಾಗೂ ಔರಾದ್ ತಾಲ್ಲೂಕಿನ ಕೆಲವು ಭಾಗಗಳಲ್ಲಿ ಭಾನುವಾರವೂ ಮಳೆಯಾಗಿದೆ. </p><p>ಮಾಂಜ್ರಾ ನದಿಯಲ್ಲಿ ಪ್ರವಾಹ ಬಂದಿರುವುದರಿಂದ ಹುಲಸೂರ ತಾಲ್ಲೂಕಿನ ಸಾಯಗಾಂವ್–ವಲಂಡಿ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ಇಪ್ಪತ್ತು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ.</p><p>ತಾಲ್ಲೂಕಿನ ಕೊಂಗಳಿ ಗ್ರಾಮದ ಸುತ್ತಮುತ್ತ ನೀರು ಆವರಿಸಿಕೊಂಡಿದ್ದು, ದ್ವೀಪವಾಗಿ ಬದಲಾಗಿದೆ. ಗ್ರಾಮಸ್ಥರು ಎಲ್ಲಿಗೂ ಹೋಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕಿನ</p><p>ಶ್ರೀಮಾಳಿ–ಯಲ್ಲಮವಾಡಿ ಸಂಪರ್ಕ ಕೂಡ ಕಡಿತಗೊಂಡಿದೆ.</p><p>ಕಮಲನಗರ ತಾಲ್ಲೂಕಿನ ಸಂಗಮ- ಠಾಣಾ ಕುಶನೂರ, ಸಂಗಮ-ಖೇಡ್ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಭಾಲ್ಕಿ ತಾಲ್ಲೂಕಿನ ದಾಡಗಿ ಸೇತುವೆ ಮೇಲಿಂದ ನೀರು ಹರಿಯುತ್ತಿರುವುದರಿಂದ ಭಾಲ್ಕಿ-ಹುಮನಾಬಾದ್– ಬಸವಕಲ್ಯಾಣ ಮಾರ್ಗ ಬಂದ್ ಆಗಿದೆ.</p><p>ಬೀದರ್, ಹುಮನಾಬಾದ್, ಔರಾದ್ ಹಾಗೂ ಬಸವಕಲ್ಯಾಣದಲ್ಲಿ ಮಳೆ ಬಿಡುವು ಕೊಟ್ಟಿದೆ. ಬೆಳಿಗ್ಗೆ ಕೆಲಕಾಲ ಜಿಟಿಜಿಟಿ ಮಳೆಯಾಯಿತು. ದಿನವಿಡೀ ಮೋಡ ಕವಿದ ವಾತಾವರಣ ಇತ್ತು.</p>.ಭೀಮಾ ನದಿ ಪ್ರವಾಹ: ಯಾದಗಿರಿ- ಕಲಬುರಗಿ ನಡುವಿನ ದೊಡ್ಡ ಹಳ್ಳದ ಸೇತುವೆ ಮುಳುಗಡೆ.ವಿಜಯಪುರ | ಬಿರುಸಿನ ಮಳೆ: ಭೀಮಾ ಪ್ರವಾಹ, ಜನಜೀವನ ಅಸ್ತವ್ಯಸ್ತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಜಿಲ್ಲೆಯ ಹುಲಸೂರ, ಕಮಲನಗರ ಹಾಗೂ ಔರಾದ್ ತಾಲ್ಲೂಕಿನ ಕೆಲವು ಭಾಗಗಳಲ್ಲಿ ಭಾನುವಾರವೂ ಮಳೆಯಾಗಿದೆ. </p><p>ಮಾಂಜ್ರಾ ನದಿಯಲ್ಲಿ ಪ್ರವಾಹ ಬಂದಿರುವುದರಿಂದ ಹುಲಸೂರ ತಾಲ್ಲೂಕಿನ ಸಾಯಗಾಂವ್–ವಲಂಡಿ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ಇಪ್ಪತ್ತು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ.</p><p>ತಾಲ್ಲೂಕಿನ ಕೊಂಗಳಿ ಗ್ರಾಮದ ಸುತ್ತಮುತ್ತ ನೀರು ಆವರಿಸಿಕೊಂಡಿದ್ದು, ದ್ವೀಪವಾಗಿ ಬದಲಾಗಿದೆ. ಗ್ರಾಮಸ್ಥರು ಎಲ್ಲಿಗೂ ಹೋಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕಿನ</p><p>ಶ್ರೀಮಾಳಿ–ಯಲ್ಲಮವಾಡಿ ಸಂಪರ್ಕ ಕೂಡ ಕಡಿತಗೊಂಡಿದೆ.</p><p>ಕಮಲನಗರ ತಾಲ್ಲೂಕಿನ ಸಂಗಮ- ಠಾಣಾ ಕುಶನೂರ, ಸಂಗಮ-ಖೇಡ್ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಭಾಲ್ಕಿ ತಾಲ್ಲೂಕಿನ ದಾಡಗಿ ಸೇತುವೆ ಮೇಲಿಂದ ನೀರು ಹರಿಯುತ್ತಿರುವುದರಿಂದ ಭಾಲ್ಕಿ-ಹುಮನಾಬಾದ್– ಬಸವಕಲ್ಯಾಣ ಮಾರ್ಗ ಬಂದ್ ಆಗಿದೆ.</p><p>ಬೀದರ್, ಹುಮನಾಬಾದ್, ಔರಾದ್ ಹಾಗೂ ಬಸವಕಲ್ಯಾಣದಲ್ಲಿ ಮಳೆ ಬಿಡುವು ಕೊಟ್ಟಿದೆ. ಬೆಳಿಗ್ಗೆ ಕೆಲಕಾಲ ಜಿಟಿಜಿಟಿ ಮಳೆಯಾಯಿತು. ದಿನವಿಡೀ ಮೋಡ ಕವಿದ ವಾತಾವರಣ ಇತ್ತು.</p>.ಭೀಮಾ ನದಿ ಪ್ರವಾಹ: ಯಾದಗಿರಿ- ಕಲಬುರಗಿ ನಡುವಿನ ದೊಡ್ಡ ಹಳ್ಳದ ಸೇತುವೆ ಮುಳುಗಡೆ.ವಿಜಯಪುರ | ಬಿರುಸಿನ ಮಳೆ: ಭೀಮಾ ಪ್ರವಾಹ, ಜನಜೀವನ ಅಸ್ತವ್ಯಸ್ತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>