ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾನಪದ ಕಲೆಗೆ ಪ್ರೋತ್ಸಾಹ ಅಗತ್ಯ: ಸಿದ್ರಾಮ ಕನೇರಿ

Last Updated 18 ಮೇ 2022, 4:31 IST
ಅಕ್ಷರ ಗಾತ್ರ

ಔರಾದ್: ‘ಜಿಲ್ಲೆಯ ಗಡಿ ಭಾಗದ ಜಾನಪದ ಕಲೆ ಹಾಗೂ ಕಲಾವಿದರಿಗೆ ಸೂಕ್ತ ಪ್ರೋತ್ಸಾಹ ಸಿಗಬೇಕು’ ಎಂದು ಭವಾನಿ ವಿವಿಧೋದ್ದೇಶ ಸಂಘದ ಕಾರ್ಯದರ್ಶಿ ಸಿದ್ರಾಮ ಕನೇರಿ ಹೇಳಿದರು.

ದೇಶದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ತಾಲ್ಲೂಕಿನ ಚಿಕ್ಲಿ (ಜೆ) ಗ್ರಾಮದಲ್ಲಿ ಈಚೆಗೆ ನಡೆದ ಗಡಿನಾಡು ಜಾನಪದ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಜಿಲ್ಲೆಯ ಗಡಿ ಭಾಗದಲ್ಲಿ ವೈವಿಧ್ಯಮಯ ಜಾನಪದ ಕಲೆಗಳಿವೆ. ಇವುಗಳು ಅತ್ಯಂತ ಮೌಲ್ಯಯುತವಾದ ಕಲೆಗಳು. ಇವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕಾಗಿದೆ’ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಜು ಜೈರಾಮ, ಹಣಮಂತ ಸಿಂಧೆ, ಲಲಿತಾ, ಕಮಲಮ್ಮ, ಬಾನುದಾಸರೆಡ್ಡಿ ಹಾಗೂ ರಾಮಪ್ಪ ಹುಸೇನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT