ಕಲಬುರ್ಗಿಯ ಕೃಷಿ ಸಂಶೋಧನೆ ಕೇಂದ್ರದ ಸಸ್ಯರೋಗ ಶಾಸ್ತ್ರಜ್ಞ ಡಾ. ಮಲ್ಲಿಕಾರ್ಜುನ ಕೆಂಗನಾಳ ಅವರು, ತೊಗರಿಗೆ ಬಾಧಿಸುವ ಬೂದಿ ರೋಗ, ಚಿಬ್ಬು ರೋಗ, ಹಳದಿ ನಂಜು ರೋಗ, ಮುಟುರು ರೋಗ, ನೆಟೆ ರೋಗ, ಗೊಡ್ಡು ರೋಗ, ಸೊರಗು ರೋಗ, ಕಡಲೆಯಲ್ಲಿ ಕಾಣಿಸುವ ಪ್ಯೂಸಿರಿಯಂ ಸೊರಗು ರೋಗ, ಒಣ ಬೇರು ಕೊಳೆ ರೋಗ, ಕಾಂಡ ಕೊಳೆ ರೋಗ, ಮಚ್ಚೆ ರೋಗ, ತುಕ್ಕು ರೋಗಗಳ ಲಕ್ಷಣ ಹಾಗೂ ನಿರ್ವಹಣೆ ಕುರಿತು ಮಾಹಿತಿ ನೀಡಿದರು.