<p><strong>ಔರಾದ್</strong>: ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆಯಾಗಿ ಹದಿನೈದು ದಿನ ಕಳೆದರೂ ಸರ್ಮಪಕ ಮಳೆಯಾಗದೆ ರೈತರಲ್ಲಿ ಆತಂಕ ಆವರಿಸಿದೆ.</p>.<p>ತಾಲ್ಲೂಕಿನಲ್ಲಿ ಶೇ 75 ರಿಂದ 80ರಷ್ಟು ಬಿತ್ತನೆ ಪೂರ್ಣ ಆಗಿದೆ. ಕೆಲ ಕಡೆ ಮೊಳಕೆ ಕಾಣುತ್ತಿವೆ. ಆದರೆ ತೇವಾಂಶ ಕೊರತೆಯಿಂದ ಅವು ನೆಲ ಬಿಟ್ಟು ಮೇಲೇಳುತ್ತಿಲ್ಲ. ಇದರಿಂದ ರೈತರಲ್ಲಿ ಆತಂಕ ಶುರುವಾಗಿದೆ.</p>.<p>ಮುಂಗಾರು ಪೂರ್ವದಲ್ಲಿ ಮಳೆ ಚೆನ್ನಾಗಿ ಆಗಿರುವುದರಿಂದ ರೈತರು ಬಹಳ ಉತ್ಸಾಹದಿಂದ ಬಿತ್ತನೆ ಮಾಡಿದ್ದಾರೆ. 64,677 ಹೆಕ್ಟೇರ್ ಪೈಕಿ ತಾಲ್ಲೂಕಿನಲ್ಲಿ 43 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸೋಯಾಬಿನ್ ಬಿತ್ತನೆಯಾಗಿದ್ದು, ಈಗ ರೈತರು ಮಳೆಗಾಗಿ ಎದುರು ನೋಡುತ್ತಿದ್ದಾರೆ.</p>.<p>ಎರಡು ದಿನದ ಹಿಂದೆ ಒಂದಿಷ್ಟು ಮಳೆಯಾಗಿದ್ದು, ಮೊಳಕೆಯಲ್ಲಿ ಚೇತರಿಕೆ ಕಂಡಿತು. ಆದರೆ ಈಗ ಮತ್ತೆ ಒಣ ಗಾಳಿ ಬೀಸುತ್ತಿರುವುದರಿಂದ ಇರುವ ತೇವಾಂಶ ಕಡಿಮೆಯಾಗಿ ರೈತರು ಕಳವಳಪಡುವಂತಾಗಿದೆ.</p>.<p>ಈ ಬಾರಿ ಮುಂಗಾರು ಮಳೆ ಚೆನ್ನಾಗಿದೆ ಎಂಬ ಭರವಸೆ ಮೇಲೆ ಬಿತ್ತನೆ ಮಾಡಿದ್ದೇವೆ. ಆದರೆ ಮಳೆ ಇಲ್ಲದೆ ಮೊಳಕೆ ನೆಲ ಬಿಟ್ಟು ಮೇಲೆ ಬರುತ್ತಿಲ್ಲ. ಹೀಗೆ ಇನ್ನೆರಡು ದಿನ ಕಳೆದರೆ ಬಿತ್ತಿದ್ದಲ್ಲ ವ್ಯರ್ಥವಾಗಲಿದೆ ಎಂದು ಮುಂಗನಾಳ ರೈತ ಗೋವಿಂದ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.</p>.<p>ವಿದ್ಯುತ್ ವ್ಯತ್ಯಯ: ಮಳೆ ಕೊರತೆ ನಡುವೆ ಪಂಪಸೆಟ್ಗಳಿಗೆ ಸಮರ್ಪಕ ವಿದ್ಯುತ್ ಸಿಗದೆ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ರೈತರಿಗೆ ಹಗಲು ಹೊತ್ತು ತ್ರಿಫೇಸ್ ವಿದ್ಯುತ್ ಕೊಡಬೇಕು ಎಂಬ ನಿಯಮ ಇದೆ. ಆದರೆ 2-3 ಗಂಟೆಯೂ ಸರ್ಮಪಕ ವಿದ್ಯತ್ ಸಿಗುತ್ತಿಲ್ಲ ಎಂಬ ಗೋಳು ರೈತರು ತೋಡಿಕೊಂಡಿದ್ದಾರೆ.</p>.<p>‘ನಮ್ಮಲ್ಲಿ ನೀರಾವರಿ ವ್ಯವಸ್ಥೆ ಇದೆ. ಹೀಗಾಗಿ ಮಳೆ ಕೊರತೆ ಎದುರಿಸಲು ಬೆಳೆಗಳಿಗೆ ನೀರು ಹಾಕಬೇಕೆಂದರೆ ಸರ್ಮಪಕ ವಿದ್ಯತ್ ಸಿಗುತ್ತಿಲ್ಲ’ ಎಂದು ನಾಗೂರ ರೈತ ಸಂತೋಷ ಮಸ್ಕಲೆ, ಹೆಡಗಾಪೂರದ ಶ್ರೀಮಂತ ಪಾಟೀಲ ಗೋಳು ತೋಡಿಕೊಂಡಿದ್ದಾರೆ.</p>.<p>ಜೆಸ್ಕಾಂನವರು ನಾಲ್ಕೈದು ಗಂಟೆಯಾದರೂ ನಿರಂತರ ವಿದ್ಯುತ್ ಕೊಟ್ಟರೆ ನೀರಾವರಿ ಸೌಲಭ್ಯ ಹೊಂದಿರುವ ರೈತರಿಗೆ ಒಂದಿಷ್ಟು ಅನುಕೂಲವಾಗುತ್ತದೆ ಎಂದು ಅವರು ಮನವಿ ಮಾಡಿದ್ದಾರೆ.</p>.<p>ಮಳೆ ಕೊರತೆಯಿಂದ ರೈತರಲ್ಲಿ ಆತಂಕ ಇನ್ನು ಎರಡು ದಿನ ಹೋದರೆ ಬಿತ್ತಿದ್ದು ವ್ಯರ್ಥ ಪಂಪ್ಸೆಟ್ಗಳಿಗೆ ಸರ್ಮಪಕ ವಿದ್ಯುತ್ ಪೂರೈಸಲು ಮನವಿ</p>.<p><strong>ಗಾಳಿ ಬೀಸುತ್ತಿರುವುದರಿಂದ ಕೆಲ ಕಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯಾಗಿತ್ತು. ಈಗ ಅದನೆಲ್ಲ ಸರಿಪಡಿಸಿ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸುತ್ತಿದ್ದೇವೆ.</strong></p><p><strong>- ರವಿ ಕಾರಬಾರಿ ಎಇಇ ಜೆಸ್ಕಾಂ ಔರಾದ್</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ಪ್ರಸಕ್ತ ಸಾಲಿನ ಮುಂಗಾರು ಬಿತ್ತನೆಯಾಗಿ ಹದಿನೈದು ದಿನ ಕಳೆದರೂ ಸರ್ಮಪಕ ಮಳೆಯಾಗದೆ ರೈತರಲ್ಲಿ ಆತಂಕ ಆವರಿಸಿದೆ.</p>.<p>ತಾಲ್ಲೂಕಿನಲ್ಲಿ ಶೇ 75 ರಿಂದ 80ರಷ್ಟು ಬಿತ್ತನೆ ಪೂರ್ಣ ಆಗಿದೆ. ಕೆಲ ಕಡೆ ಮೊಳಕೆ ಕಾಣುತ್ತಿವೆ. ಆದರೆ ತೇವಾಂಶ ಕೊರತೆಯಿಂದ ಅವು ನೆಲ ಬಿಟ್ಟು ಮೇಲೇಳುತ್ತಿಲ್ಲ. ಇದರಿಂದ ರೈತರಲ್ಲಿ ಆತಂಕ ಶುರುವಾಗಿದೆ.</p>.<p>ಮುಂಗಾರು ಪೂರ್ವದಲ್ಲಿ ಮಳೆ ಚೆನ್ನಾಗಿ ಆಗಿರುವುದರಿಂದ ರೈತರು ಬಹಳ ಉತ್ಸಾಹದಿಂದ ಬಿತ್ತನೆ ಮಾಡಿದ್ದಾರೆ. 64,677 ಹೆಕ್ಟೇರ್ ಪೈಕಿ ತಾಲ್ಲೂಕಿನಲ್ಲಿ 43 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸೋಯಾಬಿನ್ ಬಿತ್ತನೆಯಾಗಿದ್ದು, ಈಗ ರೈತರು ಮಳೆಗಾಗಿ ಎದುರು ನೋಡುತ್ತಿದ್ದಾರೆ.</p>.<p>ಎರಡು ದಿನದ ಹಿಂದೆ ಒಂದಿಷ್ಟು ಮಳೆಯಾಗಿದ್ದು, ಮೊಳಕೆಯಲ್ಲಿ ಚೇತರಿಕೆ ಕಂಡಿತು. ಆದರೆ ಈಗ ಮತ್ತೆ ಒಣ ಗಾಳಿ ಬೀಸುತ್ತಿರುವುದರಿಂದ ಇರುವ ತೇವಾಂಶ ಕಡಿಮೆಯಾಗಿ ರೈತರು ಕಳವಳಪಡುವಂತಾಗಿದೆ.</p>.<p>ಈ ಬಾರಿ ಮುಂಗಾರು ಮಳೆ ಚೆನ್ನಾಗಿದೆ ಎಂಬ ಭರವಸೆ ಮೇಲೆ ಬಿತ್ತನೆ ಮಾಡಿದ್ದೇವೆ. ಆದರೆ ಮಳೆ ಇಲ್ಲದೆ ಮೊಳಕೆ ನೆಲ ಬಿಟ್ಟು ಮೇಲೆ ಬರುತ್ತಿಲ್ಲ. ಹೀಗೆ ಇನ್ನೆರಡು ದಿನ ಕಳೆದರೆ ಬಿತ್ತಿದ್ದಲ್ಲ ವ್ಯರ್ಥವಾಗಲಿದೆ ಎಂದು ಮುಂಗನಾಳ ರೈತ ಗೋವಿಂದ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.</p>.<p>ವಿದ್ಯುತ್ ವ್ಯತ್ಯಯ: ಮಳೆ ಕೊರತೆ ನಡುವೆ ಪಂಪಸೆಟ್ಗಳಿಗೆ ಸಮರ್ಪಕ ವಿದ್ಯುತ್ ಸಿಗದೆ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ರೈತರಿಗೆ ಹಗಲು ಹೊತ್ತು ತ್ರಿಫೇಸ್ ವಿದ್ಯುತ್ ಕೊಡಬೇಕು ಎಂಬ ನಿಯಮ ಇದೆ. ಆದರೆ 2-3 ಗಂಟೆಯೂ ಸರ್ಮಪಕ ವಿದ್ಯತ್ ಸಿಗುತ್ತಿಲ್ಲ ಎಂಬ ಗೋಳು ರೈತರು ತೋಡಿಕೊಂಡಿದ್ದಾರೆ.</p>.<p>‘ನಮ್ಮಲ್ಲಿ ನೀರಾವರಿ ವ್ಯವಸ್ಥೆ ಇದೆ. ಹೀಗಾಗಿ ಮಳೆ ಕೊರತೆ ಎದುರಿಸಲು ಬೆಳೆಗಳಿಗೆ ನೀರು ಹಾಕಬೇಕೆಂದರೆ ಸರ್ಮಪಕ ವಿದ್ಯತ್ ಸಿಗುತ್ತಿಲ್ಲ’ ಎಂದು ನಾಗೂರ ರೈತ ಸಂತೋಷ ಮಸ್ಕಲೆ, ಹೆಡಗಾಪೂರದ ಶ್ರೀಮಂತ ಪಾಟೀಲ ಗೋಳು ತೋಡಿಕೊಂಡಿದ್ದಾರೆ.</p>.<p>ಜೆಸ್ಕಾಂನವರು ನಾಲ್ಕೈದು ಗಂಟೆಯಾದರೂ ನಿರಂತರ ವಿದ್ಯುತ್ ಕೊಟ್ಟರೆ ನೀರಾವರಿ ಸೌಲಭ್ಯ ಹೊಂದಿರುವ ರೈತರಿಗೆ ಒಂದಿಷ್ಟು ಅನುಕೂಲವಾಗುತ್ತದೆ ಎಂದು ಅವರು ಮನವಿ ಮಾಡಿದ್ದಾರೆ.</p>.<p>ಮಳೆ ಕೊರತೆಯಿಂದ ರೈತರಲ್ಲಿ ಆತಂಕ ಇನ್ನು ಎರಡು ದಿನ ಹೋದರೆ ಬಿತ್ತಿದ್ದು ವ್ಯರ್ಥ ಪಂಪ್ಸೆಟ್ಗಳಿಗೆ ಸರ್ಮಪಕ ವಿದ್ಯುತ್ ಪೂರೈಸಲು ಮನವಿ</p>.<p><strong>ಗಾಳಿ ಬೀಸುತ್ತಿರುವುದರಿಂದ ಕೆಲ ಕಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯಾಗಿತ್ತು. ಈಗ ಅದನೆಲ್ಲ ಸರಿಪಡಿಸಿ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸುತ್ತಿದ್ದೇವೆ.</strong></p><p><strong>- ರವಿ ಕಾರಬಾರಿ ಎಇಇ ಜೆಸ್ಕಾಂ ಔರಾದ್</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>