ಬಸ್ ನಿಲ್ದಾಣ ಮುಂಭಾಗ, ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಗಾಂಧಿ ವೃತ್ತ, ಸುಭಾಷ, ಶಿವಾಜಿ ವೃತ್ತಗಳಲ್ಲಿ ವ್ಯಾಪಾರಸ್ಥರು ಫುಟ್ಪಾತ್ ಮೇಲೂ ಸಾಮಗ್ರಿಗಳನ್ನು ಇಟ್ಟು ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಇದರಿಂದ ಜನ ಸಂಚಾರ, ವಾಹನ ಸಂಚಾರಕ್ಕೆ ಅನನುಕೂಲವಾಗಿ ಅಲ್ಲಲ್ಲಿ ಅಪಘಾತಗಳು ಸಂಭವಿಸುತ್ತಿದ್ದವು. ಇದನ್ನು ಗಮನಿಸಿದ ಡಿವೈಎಸ್ಪಿ ದೇವರಾಜ ಅವರು ರಸ್ತೆ ಬದಿಯಲ್ಲಿಟ್ಟಿದ್ದ ಸರಕು, ಜಾಹೀರಾತು ಫಲಕ, ಕಟೌಟ್ ತೆರವಿಗೆ ವರ್ತಕರ ಮನಃಪರಿವರ್ತನೆ ಮಾಡುವಲ್ಲಿ ಯಶಸ್ವಿಯಾದರು.