ಉಪ ಚುನಾವಣೆಯಲ್ಲಿ ಬಿಜೆಪಿಯ ಪ್ರಬಲ ಆಕಾಂಕ್ಷಿ ಆಗಿದ್ದ ಮತ್ತು ಕೊನೆ ಗಳಿಗೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಖೂಬಾ ಅವರು, ನಂತರದಲ್ಲಿ ಯಾವುದೇ ಪಕ್ಷದ ಜತೆ ಗುರುತಿಸಿಕೊಂಡಿಲ್ಲ. ಆದರೆ ಈಚೆಗೆ ಕ್ಷೇತ್ರದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದು ಮುಂಬರುವ ಚುನಾವಣೆಯಲ್ಲಿ ಇವರು ಮತ್ತೆ ಸ್ಪರ್ಧಿಸುವರು ಎಂಬ ಮಾತುಗಳು ಅವರ ಆಪ್ತ ವಲಯದಲ್ಲಿ ಕೇಳಿ ಬರುತ್ತಿವೆ. ಇದರ ಬೆನ್ನಲ್ಲೇ ಅವರು ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಆಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅವರೊಂದಿಗೆ ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಲಭ್ಯ ಆಗಲಿಲ್ಲ. ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ಕಾಂಗ್ರೆಸ್ ಸೇರುವ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಸೌಹಾರ್ದಯುತ ಭೇಟಿ ಇದಾಗಿತ್ತು ಎಂದು ಬೆಂಗಳೂ ರಿನಲ್ಲಿ ಅವರೊಂದಿಗಿದ್ದ ಆಪ್ತರೊಬ್ಬರು ತಿಳಿಸಿದ್ದಾರೆ.