<p><strong>ಬೀದರ್:</strong> ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಕಾಶೀನಾಥ ವಿಶ್ವಕರ್ಮ (87) ನಗರದಲ್ಲಿ ಗುರುವಾರ ನಿಧನರಾದರು.</p>.<p>ಶಿಕ್ಷಕ ವೃತ್ತಿಯಿಂದ ನಿವೃತ್ತರಾದ ನಂತರ ಸಾಮಾಜಿಕ ಚಟುವಟಿಕೆ ಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ಬುದ್ಧಿಜೀವಿ ಎಂದೇ ಗುರುತಿಸಿಕೊಂಡಿ ದ್ದರು. ಸಮಾಜಪರ ಚಿಂತಕರಾಗಿದ್ದರು.</p>.<p>ಕೊಡುಗೈ ದಾನಿಯಾಗಿದ್ದ ಅವರು, ಕುಟುಂಬದ ಮೂಲಗಳ ಪ್ರಕಾರ ಬೀದರ್ನ ರಾಮಕೃಷ್ಣ ವಿವೇಕಾನಂದ ಆಶ್ರಮದ ಕಟ್ಟಡ ನಿರ್ಮಾಣಕ್ಕೆ ₹1 ಕೋಟಿ ದೇಣಿಗೆ ಕೊಟ್ಟಿದ್ದರು. ತೆಲಂಗಾಣದ ಶಬರಿಮಾತಾ, ತಾಡವಾಯಿ ಕ್ಷೇತ್ರಕ್ಕೂ ₹1 ಕೋಟಿಗೂ ಅಧಿಕ ದೇಣಿಗೆ ಕೊಟ್ಟು ಹೃದಯ ಶ್ರೀಮಂತಿಕೆ ಮೆರೆದಿದ್ದರು.</p>.<p>ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷರಾಗಿ ಮೌನೇಶ್ವರ ಮಂದಿರ ನಿರ್ಮಾ ಣಕ್ಕೆ ಮಾರ್ಗದರ್ಶನ ಮಾಡಿದ್ದರು. ಮಂದಿರಕ್ಕೆ ಮೌನೇಶ್ವರರ ಮೂರ್ತಿಯನ್ನು ದೇಣಿಗೆ ರೂಪದಲ್ಲಿ ಕೊಟ್ಟಿದ್ದರು.</p>.<p>‘ಕಾಶೀನಾಥ ವಿಶ್ವಕರ್ಮ ಅವರು 1981ರ ಆಗಸ್ಟ್ 15 ರಿಂದ 1982 ರ ಜುಲೈ 11 ರ ವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮೂರನೇ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಜಿಲ್ಲೆಯಲ್ಲಿ ಕನ್ನಡ ಕಟ್ಟುವ ಕೆಲಸ ಪರಿಣಾಮಕಾರಿಯಾಗಿ ಮಾಡಿದ್ದರು. ಕನ್ನಡ ಪರ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿದ್ದರು’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ<br />ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹಾಗೂ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮನೋಹರ ತಿಳಿಸಿದರು.</p>.<p>ಕಾಶೀನಾಥ ವಿಶ್ವಕರ್ಮ ಅವರಿಗೆ ಮೂವರು ಪುತ್ರಿಯರು ಇದ್ದಾರೆ. ಶುಕ್ರವಾರ (ಮಾ.5) ಮಧ್ಯಾಹ್ನ 12.45ಕ್ಕೆ ನಗರದ ನರಸಿಂಹ ಝರಣಿ ಸಮೀಪದ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಕಾಶೀನಾಥ ವಿಶ್ವಕರ್ಮ (87) ನಗರದಲ್ಲಿ ಗುರುವಾರ ನಿಧನರಾದರು.</p>.<p>ಶಿಕ್ಷಕ ವೃತ್ತಿಯಿಂದ ನಿವೃತ್ತರಾದ ನಂತರ ಸಾಮಾಜಿಕ ಚಟುವಟಿಕೆ ಗಳಲ್ಲಿ ತೊಡಗಿಸಿಕೊಂಡಿದ್ದ ಅವರು, ಬುದ್ಧಿಜೀವಿ ಎಂದೇ ಗುರುತಿಸಿಕೊಂಡಿ ದ್ದರು. ಸಮಾಜಪರ ಚಿಂತಕರಾಗಿದ್ದರು.</p>.<p>ಕೊಡುಗೈ ದಾನಿಯಾಗಿದ್ದ ಅವರು, ಕುಟುಂಬದ ಮೂಲಗಳ ಪ್ರಕಾರ ಬೀದರ್ನ ರಾಮಕೃಷ್ಣ ವಿವೇಕಾನಂದ ಆಶ್ರಮದ ಕಟ್ಟಡ ನಿರ್ಮಾಣಕ್ಕೆ ₹1 ಕೋಟಿ ದೇಣಿಗೆ ಕೊಟ್ಟಿದ್ದರು. ತೆಲಂಗಾಣದ ಶಬರಿಮಾತಾ, ತಾಡವಾಯಿ ಕ್ಷೇತ್ರಕ್ಕೂ ₹1 ಕೋಟಿಗೂ ಅಧಿಕ ದೇಣಿಗೆ ಕೊಟ್ಟು ಹೃದಯ ಶ್ರೀಮಂತಿಕೆ ಮೆರೆದಿದ್ದರು.</p>.<p>ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷರಾಗಿ ಮೌನೇಶ್ವರ ಮಂದಿರ ನಿರ್ಮಾ ಣಕ್ಕೆ ಮಾರ್ಗದರ್ಶನ ಮಾಡಿದ್ದರು. ಮಂದಿರಕ್ಕೆ ಮೌನೇಶ್ವರರ ಮೂರ್ತಿಯನ್ನು ದೇಣಿಗೆ ರೂಪದಲ್ಲಿ ಕೊಟ್ಟಿದ್ದರು.</p>.<p>‘ಕಾಶೀನಾಥ ವಿಶ್ವಕರ್ಮ ಅವರು 1981ರ ಆಗಸ್ಟ್ 15 ರಿಂದ 1982 ರ ಜುಲೈ 11 ರ ವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮೂರನೇ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಜಿಲ್ಲೆಯಲ್ಲಿ ಕನ್ನಡ ಕಟ್ಟುವ ಕೆಲಸ ಪರಿಣಾಮಕಾರಿಯಾಗಿ ಮಾಡಿದ್ದರು. ಕನ್ನಡ ಪರ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿದ್ದರು’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ<br />ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹಾಗೂ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್. ಮನೋಹರ ತಿಳಿಸಿದರು.</p>.<p>ಕಾಶೀನಾಥ ವಿಶ್ವಕರ್ಮ ಅವರಿಗೆ ಮೂವರು ಪುತ್ರಿಯರು ಇದ್ದಾರೆ. ಶುಕ್ರವಾರ (ಮಾ.5) ಮಧ್ಯಾಹ್ನ 12.45ಕ್ಕೆ ನಗರದ ನರಸಿಂಹ ಝರಣಿ ಸಮೀಪದ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>