ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ಆತ್ಮಹತ್ಯೆ

Last Updated 9 ಜೂನ್ 2021, 2:58 IST
ಅಕ್ಷರ ಗಾತ್ರ

ಚಿಟಗುಪ್ಪ: ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಕೃಷಿ ಸಾಲ ಬಾಧೆಗೆ ಬೇಸತ್ತ ರೈತ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಸುಕಿನಲ್ಲಿ ಸಂಭವಿಸಿದೆ.

ಗ್ರಾಮದ ಮಾರುತಿ ಮಡೆಪ್ಪ ಪರೀಟ್ (53) ಮೃತ ರೈತ. ಅವರಿಗೆ ಐದು ಜನ ಹೆಣ್ಣುಮಕ್ಕಳಿದ್ದು, ನಾಲ್ವರಿಗೆ ಮದುವೆ ಮಾಡಿದ್ದಾರೆ. ಎರಡು ಎಕರೆ ಭೂಮಿ ಹೊಂದಿರುವ ಮಾರುತಿ ಅವರು, ಮುಸ್ತರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಾಲ ಪಡೆದಿದ್ದರು. ಖಾಸಗಿ ಸಾಲವೂ ಮಾಡಿದ್ದರಿಂದ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಚಿಟಗುಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT