ಒಂದು ತಿಂಗಳ ಅವಧಿಯಲ್ಲಿ ನಮ್ಮ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಆಗಿದೆ. ಮಾನವೀಯ ನೆಲೆಯಲ್ಲಿ ಉಚಿತ ಔಷಧಿ, ಪೌಷ್ಟಿಕಾಂಶ ಹಾಗೂ ಆಹಾರದೊಂದಿಗೆ ಆರು ತಿಂಗಳ ವರೆಗೆ ಸಂಪೂರ್ಣ ಚಿಕಿತ್ಸೆಯ ಹೊಣೆ ಹೊತ್ತುಕೊಂಡಿರುವ ನಾಗಮಾರಪಳ್ಳಿ ಫೌಂಡೇಷನ್ಗೆ ಕೃತಜ್ಞರಾಗಿದ್ದೇವೆ ಎಂದು ಕಿಟ್ ಸ್ವೀಕರಿಸಿದ ಅನೇಕ ರೋಗಿಗಳು ಹೇಳಿದರು.
ಫೌಂಡೇಷನ್ ನಿರ್ದೇಶಕ ತರುಣ್ ಎಸ್. ನಾಗಮಾರಪಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹೇಶ ಬಿರಾದಾರ, ಡಾ. ಶರಣಯ್ಯ ಸ್ವಾಮಿ, ಡಾ. ಸಿದ್ಧಾರೆಡ್ಡಿ, ಡಾ. ಶಾಂತಲಿಂಗ ಪಾಟೀಲ, ಡಾ. ಸತೀಶ್ ಪಾಟೀಲ, ಡಾ. ಸೊಹೆಲ್, ಮುಖಂಡರಾದ ಫರ್ನಾಂಡೀಸ್ ಹಿಪ್ಪಳಗಾಂವ್, ಮಹೇಶ ಗೋರನಾಳಕರ್, ಅಲಿ ಸಾಬ್, ಸಾರಾ ಅಂಜುಮ್, ರೆಹಮಾನ್ ಇದ್ದರು.