<p><strong>ಬೀದರ್:</strong> 36ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಅರಿವು ಕಾರ್ಯಕ್ರಮದ ಅಂಗವಾಗಿ ವೆಲ್ಮೆಗ್ನಾ ಗುಡ್ ನ್ಯೂಸ್ ಸಂಸ್ಥೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆ ವತಿಯಿಂದ ನಗರದ ಡಾ. ಸಾಲಿನ್ಸ್ ನೇತ್ರ ಆಸ್ಪತ್ರೆಯಲ್ಲಿ 26 ಜನರ ಉಚಿತ ನೇತ್ರ ಶಸ್ತ್ರಚಿಕಿತ್ಸೆ ನಡೆಸಲಾಯಿತು.</p>.<p>ಶಸ್ತ್ರಚಿಕಿತ್ಸೆಗೆ ಒಳಗಾದವರಿಗೆ ಉಚಿತ ಕನ್ನಡಕ ಹಾಗೂ ಔಷಧಿ ವಿತರಿಸಲಾಯಿತು.</p>.<p>ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವೆಲ್ಮೆಗ್ನಾ ಗುಡ್ ನ್ಯೂಸ್ ಸಂಸ್ಥೆ ನಿರ್ದೇಶಕಿ ಡಾ. ಸಿಬಿಲ್ ಸಾಲಿನ್ಸ್ ಅವರು,‘ಕಣ್ಣಿನ ಆರೋಗ್ಯದ ಕುರಿತು ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು’ ಎಂದು ಸಲಹೆ ಮಾಡಿದರು.</p>.<p>ನೇತ್ರ ದಾನ ಮಹಾದಾನವಾಗಿದೆ. ಮರಣದ ನಂತರ ನೇತ್ರ ದಾನ ಮಾಡುವುದರಿಂದ ಅಂಧರ ಬಾಳಲ್ಲಿ ಬೆಳಕು ಮೂಡಿಸಬಹುದು ಎಂದು ಹೇಳಿದರು.</p>.<p>ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಅಧಿಕಾರಿ ಡಾ. ಮಹೇಶ ಬಿರಾದಾರ ಮಾತನಾಡಿ,‘ವೆಲ್ಮೆಗ್ನಾ ಗುಡ್ ನ್ಯೂಸ್ ಸಂಸ್ಥೆಯು ಜಿಲ್ಲೆಯಲ್ಲಿ ಅಂಧತ್ವ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿದೆ’ ಎಂದು ಹೇಳಿದರು.</p>.<p>ನಗರಸಭೆ ಮಾಜಿ ಉಪಾಧ್ಯಕ್ಷರಾದ ಆಸ್ಪತ್ರೆಯ ಆಡಳಿತಾಧಿಕಾರಿ ಫಿಲೋಮನ್ರಾಜ್ ಪ್ರಸಾದ್, ಡಾ. ಕಾಶಿನಾಥ, ಡಾ. ವೀರೇಂದ್ರ ಪಾಟೀಲ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಸಂಜು, ಸುದೇಶ್ ಹಾಗೂ ಪ್ರಕಾಶ ಇದ್ದರು.</p>.<p>ಆಸ್ಪತ್ರೆಯ ಪುಟ್ಟರಾಜ ಬಲ್ಲೂರಕರ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> 36ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಅರಿವು ಕಾರ್ಯಕ್ರಮದ ಅಂಗವಾಗಿ ವೆಲ್ಮೆಗ್ನಾ ಗುಡ್ ನ್ಯೂಸ್ ಸಂಸ್ಥೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಇಲಾಖೆ ವತಿಯಿಂದ ನಗರದ ಡಾ. ಸಾಲಿನ್ಸ್ ನೇತ್ರ ಆಸ್ಪತ್ರೆಯಲ್ಲಿ 26 ಜನರ ಉಚಿತ ನೇತ್ರ ಶಸ್ತ್ರಚಿಕಿತ್ಸೆ ನಡೆಸಲಾಯಿತು.</p>.<p>ಶಸ್ತ್ರಚಿಕಿತ್ಸೆಗೆ ಒಳಗಾದವರಿಗೆ ಉಚಿತ ಕನ್ನಡಕ ಹಾಗೂ ಔಷಧಿ ವಿತರಿಸಲಾಯಿತು.</p>.<p>ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವೆಲ್ಮೆಗ್ನಾ ಗುಡ್ ನ್ಯೂಸ್ ಸಂಸ್ಥೆ ನಿರ್ದೇಶಕಿ ಡಾ. ಸಿಬಿಲ್ ಸಾಲಿನ್ಸ್ ಅವರು,‘ಕಣ್ಣಿನ ಆರೋಗ್ಯದ ಕುರಿತು ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು’ ಎಂದು ಸಲಹೆ ಮಾಡಿದರು.</p>.<p>ನೇತ್ರ ದಾನ ಮಹಾದಾನವಾಗಿದೆ. ಮರಣದ ನಂತರ ನೇತ್ರ ದಾನ ಮಾಡುವುದರಿಂದ ಅಂಧರ ಬಾಳಲ್ಲಿ ಬೆಳಕು ಮೂಡಿಸಬಹುದು ಎಂದು ಹೇಳಿದರು.</p>.<p>ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಅಧಿಕಾರಿ ಡಾ. ಮಹೇಶ ಬಿರಾದಾರ ಮಾತನಾಡಿ,‘ವೆಲ್ಮೆಗ್ನಾ ಗುಡ್ ನ್ಯೂಸ್ ಸಂಸ್ಥೆಯು ಜಿಲ್ಲೆಯಲ್ಲಿ ಅಂಧತ್ವ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿದೆ’ ಎಂದು ಹೇಳಿದರು.</p>.<p>ನಗರಸಭೆ ಮಾಜಿ ಉಪಾಧ್ಯಕ್ಷರಾದ ಆಸ್ಪತ್ರೆಯ ಆಡಳಿತಾಧಿಕಾರಿ ಫಿಲೋಮನ್ರಾಜ್ ಪ್ರಸಾದ್, ಡಾ. ಕಾಶಿನಾಥ, ಡಾ. ವೀರೇಂದ್ರ ಪಾಟೀಲ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಸಂಜು, ಸುದೇಶ್ ಹಾಗೂ ಪ್ರಕಾಶ ಇದ್ದರು.</p>.<p>ಆಸ್ಪತ್ರೆಯ ಪುಟ್ಟರಾಜ ಬಲ್ಲೂರಕರ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>