ಬೀದರ್: ಅಂಬೇಡ್ಕರ್ ಯುವ ಸೇನೆ ವತಿಯಿಂದ ಡಾ. ಅಂಬೇಡ್ಕರ್ ಅವರ ಮಹಾಡ್ ಸತ್ಯಾಗ್ರಹ ಹಾಗೂ ಚೌಡರ ಕೆರೆ ಪ್ರವೇಶ ದಿನದ ಪ್ರಯುಕ್ತ ಇಲ್ಲಿಯ ಹೊಟೇಲ್ ಸಪ್ನಾ ಇಂಟರ್ನ್ಯಾಷನಲ್ನಲ್ಲಿ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ನ್ಯಾಯ ಕುರಿತು ವಿಚಾರ ಸಂಕಿರಣ ನಡೆಯಿತು.
ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟ ಕುರಿತು ಅಕ್ಕಮಹಾದೇವಿ ಕಾಲೇಜು ಪ್ರಾಚಾರ್ಯ ಪ್ರೊ. ಶಿವಶರಣಪ್ಪ ಹುಗ್ಗೆ ಪಾಟೀಲ, ಡಾ. ಅನಿಲ ತೆಂಗಳಿ, ಉಪನ್ಯಾಸಕ ಹಣಮಂತ ಗೌಡಗಾಂವಕರ್ ಮಾತನಾಡಿದರು.
ಭಂತೆ ಧಮ್ಮ ರಕ್ಷಿತ ಉದ್ಘಾಟಿಸಿದರು. ಅಂಬೇಡ್ಕರ್ ಯುವ ಸೇನೆ ರಾಜ್ಯ ಅಧ್ಯಕ್ಷ ಚಂದ್ರಕಾಂತ ನಿರಾಟೆ ಅಧ್ಯಕ್ಷತೆ ವಹಿಸಿದ್ದರು.