ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನವರಿ 2 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ 2020-2021ನೇ ಸಾಲಿನಲ್ಲಿ ರೈತರು ಪೂರೈಸುವ ಪ್ರತಿ ಟನ್ ಕಬ್ಬಿಗೆ₹ 2,400 ಬೆಲೆ ಪಾವತಿಸುವುದಾಗಿ ಎಲ್ಲ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಒಪ್ಪಿಕೊಂಡಿದ್ದರು. ಆದರೆ, ಪ್ರತಿ ಟನ್ಗೆ₹ 1,950 ಮಾತ್ರ ಸಂದಾಯ ಮಾಡಲಾಗಿದೆ. ಉಳಿದ ಹಣಕ್ಕಾಗಿ ಸರ್ಕಾರ, ಜಿಲ್ಲಾ ಆಡಳಿತ ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಲಿಖಿತ ಮನವಿ ಪತ್ರ ಸಲ್ಲಿಕೆ ಹಾಗೂ ಮೌಖಿಕ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.