ಭಾಲ್ಕಿ: ತಾಲ್ಲೂಕಿನ ಹಲಬರ್ಗಾ ಗ್ರಾಮದ ವಸತಿ ನಿಲಯದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಜನರಿಗೆ ಬುಧವಾರ ಬಿಜೆಪಿ ಮುಖಂಡ ಮಹೇಶ ಮಠಪತಿ ನೇತೃತ್ವದ ತಂಡದವರು ಹಣ್ಣು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ವೈರಾಣುವಿನ ಹರಡುವಿಕೆಯನ್ನು ತಡೆಯಲು ಇತರ ರಾಜ್ಯ, ಜಿಲ್ಲೆಗಳಿಂದ ಆಗಮಿಸಿದವರಿಗೆ ಕ್ಯಾರಂಟೈನ್ ಕೇಂದ್ರದಲ್ಲಿ ಇಡಲಾಗುತ್ತಿದ್ದು, ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದೆ ಸರ್ಕಾರದ ಆದೇಶದ ಕಟ್ಟುನಿಟ್ಟಿನ ಪಾಲನೆ ಮಾಡಬೇಕು ಎಂದು ಹೇಳಿದರು.
ಸುರಕ್ಷತೆಗಾಗಿ ಯಾವಾಗಲೂ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಕೆ ಮಾಡಬೇಕು. ಪರಸ್ಪರ ಅಂತರ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮ ಲೆಕ್ಕಿಗ ರಾಮೇಶ್ವರ, ಪ್ರದೀಪ ಮೇತ್ರಸ್ಕರ್, ರಾಮಯ್ಯಾ ಸ್ವಾಮಿ, ದತ್ತಾತ್ರಿ ಈಡಿಗಾರ, ಅವಿನಾಶ ಮಡಿವಾಳ, ಮಲ್ಲಿಕಾರ್ಜುನ ಮೂಲಗೆ, ಆಸ್ಪತ್ರೆ ಸಿಬ್ಬಂದಿ ಸುರೇಶ ಇದ್ದರು.