<p><strong>ಔರಾದ್: </strong>ಇಲ್ಲಿಯ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ ಬೆಂಗಳೂರಿನಲ್ಲಿ ಧರಣಿ ನಡೆಸಿದರು.</p>.<p>ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಇಡೀ ದಿನ ಧರಣಿಗೆ ಕುಳಿತರು. ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವ ಪಡೆದಿರುವ ಔರಾದ್ನ ಅಮರೇಶ್ವರ ದೇವಸ್ಥಾನವು ಸರ್ಕಾರದ ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಆದರೆ, ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಹೇಳಿದರು.</p>.<p>ಪ್ರಸ್ತುತ ದೇವಸ್ಥಾನದ ಮಹಾದ್ವಾರ ಬೀಳುವ ಸ್ಥಿತಿಯಲ್ಲಿದೆ. ಐದು ದಶಕದಿಂದ ನಡೆದುಕೊಂಡು ಬಂದ ದಾಸೋಹ ಸ್ಥಗಿತಗೊಂಡಿದೆ. ಕಲ್ಯಾಣ ಮಂಟಪ ಹಾಳಾಗಿದೆ. ಪೊಲೀಸ್ ಭದ್ರತೆ ಇಲ್ಲದೆ ದೇವಸ್ಥಾನದಲ್ಲಿ ಕುಡುಕರ ಮತ್ತು ಕಳ್ಳರ ಕಾಟ ಜಾಸ್ತಿಯಾಗಿದೆ ಎಂದು ತಿಳಿಸಿದರು.</p>.<p>ದೇವಸ್ಥಾನ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ದೇವಸ್ಥಾನದ ಆಡಳಿತಾಧಿಕಾರಿ ಸಹಾಯಕ ಆಯಕ್ತರು ಒಳಗೊಂಡಂತೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮುಜರಾಯಿ ಇಲಾಖೆ ಸಚಿವರ ಬಳಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗಮನಕ್ಕೆ ತರುವ ಉದ್ದೇಶದಿಂದ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್: </strong>ಇಲ್ಲಿಯ ಅಮರೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಗುರುನಾಥ ವಡ್ಡೆ ಬೆಂಗಳೂರಿನಲ್ಲಿ ಧರಣಿ ನಡೆಸಿದರು.</p>.<p>ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಇಡೀ ದಿನ ಧರಣಿಗೆ ಕುಳಿತರು. ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವ ಪಡೆದಿರುವ ಔರಾದ್ನ ಅಮರೇಶ್ವರ ದೇವಸ್ಥಾನವು ಸರ್ಕಾರದ ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಆದರೆ, ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಹೇಳಿದರು.</p>.<p>ಪ್ರಸ್ತುತ ದೇವಸ್ಥಾನದ ಮಹಾದ್ವಾರ ಬೀಳುವ ಸ್ಥಿತಿಯಲ್ಲಿದೆ. ಐದು ದಶಕದಿಂದ ನಡೆದುಕೊಂಡು ಬಂದ ದಾಸೋಹ ಸ್ಥಗಿತಗೊಂಡಿದೆ. ಕಲ್ಯಾಣ ಮಂಟಪ ಹಾಳಾಗಿದೆ. ಪೊಲೀಸ್ ಭದ್ರತೆ ಇಲ್ಲದೆ ದೇವಸ್ಥಾನದಲ್ಲಿ ಕುಡುಕರ ಮತ್ತು ಕಳ್ಳರ ಕಾಟ ಜಾಸ್ತಿಯಾಗಿದೆ ಎಂದು ತಿಳಿಸಿದರು.</p>.<p>ದೇವಸ್ಥಾನ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ದೇವಸ್ಥಾನದ ಆಡಳಿತಾಧಿಕಾರಿ ಸಹಾಯಕ ಆಯಕ್ತರು ಒಳಗೊಂಡಂತೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮುಜರಾಯಿ ಇಲಾಖೆ ಸಚಿವರ ಬಳಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈ ಬಗ್ಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಗಮನಕ್ಕೆ ತರುವ ಉದ್ದೇಶದಿಂದ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>