<p><strong>ಶ್ರೀಮಂಡಲ್(ಜನವಾಡ):</strong> ಬೀದರ್ ತಾಲ್ಲೂಕಿನ ಶ್ರೀಮಂಡಲ್ ಗ್ರಾಮ ಪಂಚಾಯಿತಿಗೆ ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಮಾಡಿದರು.</p>.<p>ಶ್ರೀಮಂಡಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಗುಣಶೆಟ್ಟೆ ಹಾಗೂ ಅಭಿವೃದ್ಧಿ ಅಧಿಕಾರಿ ಶರತಕುಮಾರ ಅಭಿಮಾನ್ ಪುರಸ್ಕಾರ ಸ್ವೀಕರಿಸಿದರು.<br> ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯಿಂದ ಕೊಡಲಾಗುವ ಪುರಸ್ಕಾರವು ₹ 5 ಲಕ್ಷ, ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.<br> ನರೇಗಾ ಪರಿಣಾಮಕಾರಿ ಅನುಷ್ಠಾನ, ಕೂಸಿನ ಮನೆ, ಡಿಜಿಟಲ್ ಗ್ರಂಥಾಲಯ ನಿರ್ವಹಣೆ, ತೆರಿಗೆ ಸಂಗ್ರಹ, ನೀರು, ಆರೋಗ್ಯ, ನೈರ್ಮಲ್ಯ, ಮಹಿಳಾ ಸಬಲೀಕರಣ ಹಾಗೂ ಮೂಲಸೌಕರ್ಯ ಕಾರ್ಯಗಳಿಗಾಗಿ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಒಲಿದು ಬಂದಿದೆ.</p>.<p>ಪುರಸ್ಕಾರದ ಹಣವನ್ನು ಕುಡಿಯುವ ನೀರಿನ ಯೋಜನೆ ವಿಸ್ತರಣೆ, ಸಮುದಾಯ ಶೌಚಾಲಯ ಹಾಗೂ ಇತರ ಕಾರ್ಯಗಳಿಗೆ ಬಳಸಲಾಗುವುದು ಎಂದು ಶರತಕುಮಾರ ಅಭಿಮಾನ್ ತಿಳಿಸಿದರು.</p>.<p>ಮಂಡ್ಯ ಪ್ರತಿನಿಧಿಗಳ ಭೇಟಿ: ಶ್ರೀಮಂಡಲ್ ಗ್ರಾಮ ಪಂಚಾಯಿತಿಗೆ ಮಂಡ್ಯ ಜಿಲ್ಲೆಯ ಭಾರತಿನಗರ, ಹಲಗೂರು, ಹಕ್ಕೇರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿಗಳು ಈಚೆಗೆ ಭೇಟಿ ನೀಡಿದರು.<br /> ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.<br /> ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಮಂಡ್ಯ ಜಿಲ್ಲೆಯ ಪ್ರತಿನಿಧಿಗಳಿಗೆ ಸಂವಿಧಾನ ಪೀಠಿಕೆ ನೀಡಿ ಸ್ವಾಗತಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀಮಂಡಲ್(ಜನವಾಡ):</strong> ಬೀದರ್ ತಾಲ್ಲೂಕಿನ ಶ್ರೀಮಂಡಲ್ ಗ್ರಾಮ ಪಂಚಾಯಿತಿಗೆ ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಮಾಡಿದರು.</p>.<p>ಶ್ರೀಮಂಡಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಗುಣಶೆಟ್ಟೆ ಹಾಗೂ ಅಭಿವೃದ್ಧಿ ಅಧಿಕಾರಿ ಶರತಕುಮಾರ ಅಭಿಮಾನ್ ಪುರಸ್ಕಾರ ಸ್ವೀಕರಿಸಿದರು.<br> ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯಿಂದ ಕೊಡಲಾಗುವ ಪುರಸ್ಕಾರವು ₹ 5 ಲಕ್ಷ, ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.<br> ನರೇಗಾ ಪರಿಣಾಮಕಾರಿ ಅನುಷ್ಠಾನ, ಕೂಸಿನ ಮನೆ, ಡಿಜಿಟಲ್ ಗ್ರಂಥಾಲಯ ನಿರ್ವಹಣೆ, ತೆರಿಗೆ ಸಂಗ್ರಹ, ನೀರು, ಆರೋಗ್ಯ, ನೈರ್ಮಲ್ಯ, ಮಹಿಳಾ ಸಬಲೀಕರಣ ಹಾಗೂ ಮೂಲಸೌಕರ್ಯ ಕಾರ್ಯಗಳಿಗಾಗಿ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಒಲಿದು ಬಂದಿದೆ.</p>.<p>ಪುರಸ್ಕಾರದ ಹಣವನ್ನು ಕುಡಿಯುವ ನೀರಿನ ಯೋಜನೆ ವಿಸ್ತರಣೆ, ಸಮುದಾಯ ಶೌಚಾಲಯ ಹಾಗೂ ಇತರ ಕಾರ್ಯಗಳಿಗೆ ಬಳಸಲಾಗುವುದು ಎಂದು ಶರತಕುಮಾರ ಅಭಿಮಾನ್ ತಿಳಿಸಿದರು.</p>.<p>ಮಂಡ್ಯ ಪ್ರತಿನಿಧಿಗಳ ಭೇಟಿ: ಶ್ರೀಮಂಡಲ್ ಗ್ರಾಮ ಪಂಚಾಯಿತಿಗೆ ಮಂಡ್ಯ ಜಿಲ್ಲೆಯ ಭಾರತಿನಗರ, ಹಲಗೂರು, ಹಕ್ಕೇರಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿಗಳು ಈಚೆಗೆ ಭೇಟಿ ನೀಡಿದರು.<br /> ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.<br /> ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಮಂಡ್ಯ ಜಿಲ್ಲೆಯ ಪ್ರತಿನಿಧಿಗಳಿಗೆ ಸಂವಿಧಾನ ಪೀಠಿಕೆ ನೀಡಿ ಸ್ವಾಗತಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>