<p>ಕಮಲನಗರ: ತಾಲ್ಲೂಕಿನ ವಿವಿಧೆಡೆ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ಶಾಂತಿಯುತವಾಗಿ ವಿಸರ್ಜನೆ ಮಾಡಲಾಯಿತು.</p>.<p>ಕಮಲನಗರದ ರಸ್ತೆಯಲ್ಲಿರುವ ವ್ಯಾಪಾರ ಗಣೇಶ ಮಂಡಳಿಯ ವಿಘ್ನೇಶ್ವರನ ಮೆರವಣಿಗೆಗೆ ಮಂಡಳಿಯ ಅಧ್ಯಕ್ಷ ಶಿವಾನಂದ ವಡ್ಡೆ ಚಾಲನೆ ನೀಡಿದರು. ಮಂಡಳಿಯ ಸದಸ್ಯರು ಮತ್ತು ಸಾರ್ವಜನಿಕರು ಮೆರವಣಿಗೆಯಲ್ಲಿ ಗಣೇಶನ ಹಾಡಿಗೆ ಹೆಜ್ಜೆ ಹಾಕಿದರು.</p>.<p>ಹಿಂದೂ ಗಣೇಶ ಮಂಡಳಿಯ ಮೆರವಣಿಗೆಗೆ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಲಿಂಗಾನಂದ ಮಹಾಜನ್ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.</p>.<p>ತಾಲ್ಲೂಕಿನ ಎಲ್ಲ ಕಡೆ ಭಾಗಶಃ ಗಣೇಶ ಮೂರ್ತಿಗಳ ವಿಸರ್ಜನೆ ಮುಗಿದಿವೆ. ಎಲ್ಲೂ ಗಲಾಟೆ ನಡೆದಿಲ್ಲ ಎಂದು ಸಿಪಿಐ ಅಮರಪ್ಪ ಶಿವಬಲ್ ತಿಳಿಸಿದರು.</p>.<p>ತಾಲ್ಲೂಕಿನ 15 ಕಡೆಗಳಲ್ಲಿ ಗಣೇಶನ ವಿಸರ್ಜನೆ ಬಾಕಿ ಇದೆ. ಅದಕ್ಕಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಎಸ್ಐ ಚಂದ್ರಶೇಖರ ನಿರ್ಣೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಮಲನಗರ: ತಾಲ್ಲೂಕಿನ ವಿವಿಧೆಡೆ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ಶಾಂತಿಯುತವಾಗಿ ವಿಸರ್ಜನೆ ಮಾಡಲಾಯಿತು.</p>.<p>ಕಮಲನಗರದ ರಸ್ತೆಯಲ್ಲಿರುವ ವ್ಯಾಪಾರ ಗಣೇಶ ಮಂಡಳಿಯ ವಿಘ್ನೇಶ್ವರನ ಮೆರವಣಿಗೆಗೆ ಮಂಡಳಿಯ ಅಧ್ಯಕ್ಷ ಶಿವಾನಂದ ವಡ್ಡೆ ಚಾಲನೆ ನೀಡಿದರು. ಮಂಡಳಿಯ ಸದಸ್ಯರು ಮತ್ತು ಸಾರ್ವಜನಿಕರು ಮೆರವಣಿಗೆಯಲ್ಲಿ ಗಣೇಶನ ಹಾಡಿಗೆ ಹೆಜ್ಜೆ ಹಾಕಿದರು.</p>.<p>ಹಿಂದೂ ಗಣೇಶ ಮಂಡಳಿಯ ಮೆರವಣಿಗೆಗೆ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಲಿಂಗಾನಂದ ಮಹಾಜನ್ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.</p>.<p>ತಾಲ್ಲೂಕಿನ ಎಲ್ಲ ಕಡೆ ಭಾಗಶಃ ಗಣೇಶ ಮೂರ್ತಿಗಳ ವಿಸರ್ಜನೆ ಮುಗಿದಿವೆ. ಎಲ್ಲೂ ಗಲಾಟೆ ನಡೆದಿಲ್ಲ ಎಂದು ಸಿಪಿಐ ಅಮರಪ್ಪ ಶಿವಬಲ್ ತಿಳಿಸಿದರು.</p>.<p>ತಾಲ್ಲೂಕಿನ 15 ಕಡೆಗಳಲ್ಲಿ ಗಣೇಶನ ವಿಸರ್ಜನೆ ಬಾಕಿ ಇದೆ. ಅದಕ್ಕಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಎಸ್ಐ ಚಂದ್ರಶೇಖರ ನಿರ್ಣೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>