<p>ಬೀದರ್: ಕೋವಿಡ್ ಹಾಗೂ ಇತರ ವೈರಾಣುಗಳು ಹರಡುವ ಸಾಧ್ಯತೆ ಕಾರಣ ಗಣೇಶ ಉತ್ಸವ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸಲಹೆ ಮಾಡಿದರು.</p>.<p>ಗಣೇಶ ಉತ್ಸವ ಪ್ರಯುಕ್ತ ನಗರದ ಬೀದರ್ನ ಪೊಲೀಸ್ ಮುಖ್ಯಾಲಯದ ಆವರಣದಲ್ಲಿ ಬುಧವಾರ ನಡೆದ ಶಾಂತಿ ಪಾಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ನೆರೆಯ ಕೇರಳದಲ್ಲಿ ನಿಫಾ ವೈರಾಣು ಕಾಣಿಸಿಕೊಂಡಿದೆ. ಮನುಷ್ಯನ ಜೀವಕ್ಕೆ ಮಾರಕವಾದ ಹೊಸ ಹೊಸ ವೈರಾಣುಗಳು ದಿನೇ ದಿನೇ ಪತ್ತೆಯಾಗುತ್ತಿವೆ ಎಂದು ಹೇಳಿದರು.</p>.<p>ಗಣೇಶ ಉತ್ಸವ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರ ಕಾಪಾಡುವುದು ಸೇರಿದಂತೆ ಎಲ್ಲ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಉತ್ಸವದ ಯಶಸ್ವಿ ಆಚರಣೆಗೆ ಜಿಲ್ಲಾ ಆಡಳಿತ ಹಾಗೂ ಪೊಲೀಸ್ ಇಲಾಖೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>ಗಣೇಶ ಉತ್ಸವ ವೇಳೆ ಸೂಕ್ತ ಪೊಲೀಸ್ ಬಂದೋಬಸ್ತ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ತಿಳಿಸಿದರು.</p>.<p>ಏನೇ ಘಟನೆ ಸಂಭವಿಸಿದರೂ ಪತ್ತೆಗೆ ಅನುಕೂಲವಾಗುವಂತೆ ಗಣೇಶ ಮಂಟಪಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಹೇಳಿದರು.</p>.<p>ಸ್ಥಳೀಯ ಆಡಳಿತದ ಪರವಾನಗಿ ಪಡೆದು, ಬಯಲು ಪ್ರದೇಶದಲ್ಲಿ ಮೂರ್ತಿ ಪ್ರತಿಷ್ಠಾಪಿಸಬೇಕು. ಐದು ದಿನ ಮಾತ್ರ ಉತ್ಸವ ಆಚರಿಸಬೇಕು. ಪ್ರತಿಷ್ಠಾಪನೆ, ವಿಸರ್ಜನೆ ಮೆರವಣಿಗೆ, ಸಾಂಸ್ಕøತಿಕ ಕಾರ್ಯಕ್ರಮ, ಡಿಜೆ ಬಳಕೆಗೆ ಅವಕಾಶ ಇಲ್ಲ. ಆಯೋಜಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.</p>.<p>ಹಬ್ಬದ ವೇಳೆ ಅವಘಡಗಳು ಸಂಭವಿಸುವ ಸಾಧ್ಯತೆಗಳು ಇರುತ್ತವೆ. ಗಣೇಶ ಮಂಡಳಿಗಳು ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಸ್ವಯಂ ಸೇವಕರನ್ನು ನೇಮಿಸಬೇಕು ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ್ ಎಂ. ಬ್ಯಾಕೋಡ್ ಹೇಳಿದರು.</p>.<p>ಉತ್ಸವದ ಸಂದರ್ಭದಲ್ಲಿ ನಗರ ಸೌಂದರ್ಯೀಕರಣ ಹಾಗೂ ಶುಚಿತ್ವಕ್ಕೆ ಒತ್ತು ಕೊಡಲಾಗುವುದು ಎಂದು ನಗರಸಭೆ ಆಯುಕ್ತ ರವೀಂದ್ರನಾಥ ಅಂಗಡಿ ತಿಳಿಸಿದರು.</p>.<p>ಪ್ರೊಬೆಷ್ನರಿ ಐಎಎಸ್ ಅಧಿಕಾರಿ ಕೀರ್ತನಾ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಗಣೇಶ ಮಹಾಮಂಡಳ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ, ಮುಖಂಡರಾದ ಸೂರ್ಯಕಾಂತ ಶೆಟಕಾರ್, ಇರ್ಷಾದ್ ಅಲಿ ಪೈಲ್ವಾನ್ ಮಾತನಾಡಿದರು.</p>.<p>ಪ್ರಮುಖರಾದ ನಂದಕಿಶೋರ ವರ್ಮಾ, ಶಾಹೀನ್ ಪಟೇಲ್ ಇದ್ದರು. ಸಿಪಿಐ ಮಲ್ಲಮ್ಮ ಚೌಬೆ ನಿರೂಪಿಸಿದರು. ಡಿವೈಎಸ್ಪಿ ಕೆ.ಎಂ. ಸತೀಶ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಕೋವಿಡ್ ಹಾಗೂ ಇತರ ವೈರಾಣುಗಳು ಹರಡುವ ಸಾಧ್ಯತೆ ಕಾರಣ ಗಣೇಶ ಉತ್ಸವ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಸಲಹೆ ಮಾಡಿದರು.</p>.<p>ಗಣೇಶ ಉತ್ಸವ ಪ್ರಯುಕ್ತ ನಗರದ ಬೀದರ್ನ ಪೊಲೀಸ್ ಮುಖ್ಯಾಲಯದ ಆವರಣದಲ್ಲಿ ಬುಧವಾರ ನಡೆದ ಶಾಂತಿ ಪಾಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ನೆರೆಯ ಕೇರಳದಲ್ಲಿ ನಿಫಾ ವೈರಾಣು ಕಾಣಿಸಿಕೊಂಡಿದೆ. ಮನುಷ್ಯನ ಜೀವಕ್ಕೆ ಮಾರಕವಾದ ಹೊಸ ಹೊಸ ವೈರಾಣುಗಳು ದಿನೇ ದಿನೇ ಪತ್ತೆಯಾಗುತ್ತಿವೆ ಎಂದು ಹೇಳಿದರು.</p>.<p>ಗಣೇಶ ಉತ್ಸವ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರ ಕಾಪಾಡುವುದು ಸೇರಿದಂತೆ ಎಲ್ಲ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಉತ್ಸವದ ಯಶಸ್ವಿ ಆಚರಣೆಗೆ ಜಿಲ್ಲಾ ಆಡಳಿತ ಹಾಗೂ ಪೊಲೀಸ್ ಇಲಾಖೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.</p>.<p>ಗಣೇಶ ಉತ್ಸವ ವೇಳೆ ಸೂಕ್ತ ಪೊಲೀಸ್ ಬಂದೋಬಸ್ತ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ತಿಳಿಸಿದರು.</p>.<p>ಏನೇ ಘಟನೆ ಸಂಭವಿಸಿದರೂ ಪತ್ತೆಗೆ ಅನುಕೂಲವಾಗುವಂತೆ ಗಣೇಶ ಮಂಟಪಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಹೇಳಿದರು.</p>.<p>ಸ್ಥಳೀಯ ಆಡಳಿತದ ಪರವಾನಗಿ ಪಡೆದು, ಬಯಲು ಪ್ರದೇಶದಲ್ಲಿ ಮೂರ್ತಿ ಪ್ರತಿಷ್ಠಾಪಿಸಬೇಕು. ಐದು ದಿನ ಮಾತ್ರ ಉತ್ಸವ ಆಚರಿಸಬೇಕು. ಪ್ರತಿಷ್ಠಾಪನೆ, ವಿಸರ್ಜನೆ ಮೆರವಣಿಗೆ, ಸಾಂಸ್ಕøತಿಕ ಕಾರ್ಯಕ್ರಮ, ಡಿಜೆ ಬಳಕೆಗೆ ಅವಕಾಶ ಇಲ್ಲ. ಆಯೋಜಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.</p>.<p>ಹಬ್ಬದ ವೇಳೆ ಅವಘಡಗಳು ಸಂಭವಿಸುವ ಸಾಧ್ಯತೆಗಳು ಇರುತ್ತವೆ. ಗಣೇಶ ಮಂಡಳಿಗಳು ಗಣೇಶ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಸ್ವಯಂ ಸೇವಕರನ್ನು ನೇಮಿಸಬೇಕು ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ್ ಎಂ. ಬ್ಯಾಕೋಡ್ ಹೇಳಿದರು.</p>.<p>ಉತ್ಸವದ ಸಂದರ್ಭದಲ್ಲಿ ನಗರ ಸೌಂದರ್ಯೀಕರಣ ಹಾಗೂ ಶುಚಿತ್ವಕ್ಕೆ ಒತ್ತು ಕೊಡಲಾಗುವುದು ಎಂದು ನಗರಸಭೆ ಆಯುಕ್ತ ರವೀಂದ್ರನಾಥ ಅಂಗಡಿ ತಿಳಿಸಿದರು.</p>.<p>ಪ್ರೊಬೆಷ್ನರಿ ಐಎಎಸ್ ಅಧಿಕಾರಿ ಕೀರ್ತನಾ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಗಣೇಶ ಮಹಾಮಂಡಳ ಅಧ್ಯಕ್ಷ ಚಂದ್ರಶೇಖರ ಪಾಟೀಲ, ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ, ಮುಖಂಡರಾದ ಸೂರ್ಯಕಾಂತ ಶೆಟಕಾರ್, ಇರ್ಷಾದ್ ಅಲಿ ಪೈಲ್ವಾನ್ ಮಾತನಾಡಿದರು.</p>.<p>ಪ್ರಮುಖರಾದ ನಂದಕಿಶೋರ ವರ್ಮಾ, ಶಾಹೀನ್ ಪಟೇಲ್ ಇದ್ದರು. ಸಿಪಿಐ ಮಲ್ಲಮ್ಮ ಚೌಬೆ ನಿರೂಪಿಸಿದರು. ಡಿವೈಎಸ್ಪಿ ಕೆ.ಎಂ. ಸತೀಶ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>