<p><strong>ಬಸವಕಲ್ಯಾಣ (ಬೀದರ್)</strong>: ತಾಲ್ಲೂಕಿನ ಮಂಠಾಳ ಠಾಣೆಯ ವ್ಯಾಪ್ತಿಯ ಉಜಳಂಬ ಗ್ರಾಮದ ಸರ್ವೇ ನಂಬರ್ ಹೊಂದಿರುವ ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿನ ಹೊಲವೊಂದರಲ್ಲಿ ಬೆಳೆದ ಅಂದಾಜು ₹3 ಕೋಟಿ ಮೌಲ್ಯದ ಗಾಂಜಾ ಗಿಡಗಳನ್ನು ಭಾನುವಾರ ಜಿಲ್ಲಾ ಪೊಲೀಸರು ಜಪ್ತಿ ಮಾಡಿದ್ದಾರೆ.</p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿಯವರ ನೇತೃತ್ವದಲ್ಲಿ ದಾಳಿ ನಡೆಸಿ, ಗಾಂಜಾ ಬೆಳೆ ಕಿತ್ತು ಹಾಕಿ ನಾಶಪಡಿಸಲಾಗಿದೆ.</p><p> 6 ಅಡಿ ಎತ್ತರ ಬೆಳೆದಿದ್ದ ಗಾಂಜಾ ಗಿಡಗಳನ್ನು ನಾಶಪಡಿಸಿದರು. ತಾವು ಸ್ವತಃ ಸಹ ಕೆಲ ಗಿಡಗಳನ್ನು ಕಿತ್ತು ಹಾಕಿದರು. ಮಹಾರಾಷ್ಟ್ರ ಮೂಲದ ಬಸವರಾಜ ಎನ್ನುವವರು ಗಾಂಜಾ ಬೆಳೆಸಿದ್ದರು.</p><p>ನಂತರ ಪ್ರದೀಪ ಗುಂಟಿ ಅವರು ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಪೊಲೀಸ್ ಸಿಬ್ಬಂದಿಯಿಂದ ಈಗಾಗಲೇ ಆಳೆತ್ತರಕ್ಕೆ ಬೆಳೆದ ನೂರಾರು ಗಾಂಜಾ ಗಿಡಗಳನ್ನು ಕಿತ್ತು ಹಾಕಿದ್ದೇವೆ. ಗಿಡ ಬೆಳೆದ ಜಮೀನು ಕರ್ನಾಟಕದ ಉಜಳಂಬ ಗ್ರಾಮದ ವ್ಯಾಪ್ತಿಯಲ್ಲಿದ್ದರೆ ಇದರ ಮಾಲೀಕ ಬಸವರಾಜ ಎನ್ನುವವರು ಮಹಾರಾಷ್ಟ್ರದಲ್ಲಿ ವಾಸಿಸುತ್ತಾರೆ' ಎಂದರು.</p><p>ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್, ಸಿಪಿಐ ಕೃಷ್ಣಕುಮಾರ ಪಾಟೀಲ, ಸಬ್ ಇನ್ ಸ್ಪೆಕ್ಟರ್ ರೇಣುಕಾ ಹಾಗೂ ಸಿಬ್ಬಂದಿ ಹಾಜರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್)</strong>: ತಾಲ್ಲೂಕಿನ ಮಂಠಾಳ ಠಾಣೆಯ ವ್ಯಾಪ್ತಿಯ ಉಜಳಂಬ ಗ್ರಾಮದ ಸರ್ವೇ ನಂಬರ್ ಹೊಂದಿರುವ ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿನ ಹೊಲವೊಂದರಲ್ಲಿ ಬೆಳೆದ ಅಂದಾಜು ₹3 ಕೋಟಿ ಮೌಲ್ಯದ ಗಾಂಜಾ ಗಿಡಗಳನ್ನು ಭಾನುವಾರ ಜಿಲ್ಲಾ ಪೊಲೀಸರು ಜಪ್ತಿ ಮಾಡಿದ್ದಾರೆ.</p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿಯವರ ನೇತೃತ್ವದಲ್ಲಿ ದಾಳಿ ನಡೆಸಿ, ಗಾಂಜಾ ಬೆಳೆ ಕಿತ್ತು ಹಾಕಿ ನಾಶಪಡಿಸಲಾಗಿದೆ.</p><p> 6 ಅಡಿ ಎತ್ತರ ಬೆಳೆದಿದ್ದ ಗಾಂಜಾ ಗಿಡಗಳನ್ನು ನಾಶಪಡಿಸಿದರು. ತಾವು ಸ್ವತಃ ಸಹ ಕೆಲ ಗಿಡಗಳನ್ನು ಕಿತ್ತು ಹಾಕಿದರು. ಮಹಾರಾಷ್ಟ್ರ ಮೂಲದ ಬಸವರಾಜ ಎನ್ನುವವರು ಗಾಂಜಾ ಬೆಳೆಸಿದ್ದರು.</p><p>ನಂತರ ಪ್ರದೀಪ ಗುಂಟಿ ಅವರು ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಪೊಲೀಸ್ ಸಿಬ್ಬಂದಿಯಿಂದ ಈಗಾಗಲೇ ಆಳೆತ್ತರಕ್ಕೆ ಬೆಳೆದ ನೂರಾರು ಗಾಂಜಾ ಗಿಡಗಳನ್ನು ಕಿತ್ತು ಹಾಕಿದ್ದೇವೆ. ಗಿಡ ಬೆಳೆದ ಜಮೀನು ಕರ್ನಾಟಕದ ಉಜಳಂಬ ಗ್ರಾಮದ ವ್ಯಾಪ್ತಿಯಲ್ಲಿದ್ದರೆ ಇದರ ಮಾಲೀಕ ಬಸವರಾಜ ಎನ್ನುವವರು ಮಹಾರಾಷ್ಟ್ರದಲ್ಲಿ ವಾಸಿಸುತ್ತಾರೆ' ಎಂದರು.</p><p>ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್, ಸಿಪಿಐ ಕೃಷ್ಣಕುಮಾರ ಪಾಟೀಲ, ಸಬ್ ಇನ್ ಸ್ಪೆಕ್ಟರ್ ರೇಣುಕಾ ಹಾಗೂ ಸಿಬ್ಬಂದಿ ಹಾಜರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>