ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌: ಹುಮನಾಬಾದ್ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ– ಇಬ್ಬರ ಸಾವು

Published 22 ಜನವರಿ 2024, 3:31 IST
Last Updated 22 ಜನವರಿ 2024, 3:31 IST
ಅಕ್ಷರ ಗಾತ್ರ

ಹುಮನಾಬಾದ್: ಪಟ್ಟಣ ಹೊರವಲಯದ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಸೋರಿಕೆಯಿಂದ ಇಬ್ಬರು ಯುವಕರು ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ.

ಶ್ರೀ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಲಿಮಿಟೆಡ್ ಕಂಪನಿಯಲ್ಲಿ ಈ ಅವಘಡ ಭಾನುವಾರ ತಡರಾತ್ರಿ ಸಂಭವಿಸಿದೆ. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕೆಮಿಕಲ್ ಗ್ಯಾಸ್ ಸೋರಿಕೆಯಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ತಾಲ್ಲೂಕಿನ ವಡ್ಡನಕೇರಾ ಗ್ರಾಮದ ಮೊಹಮ್ಮದ್ ಶಾಬಾದ್ (21) ಹಾಗೂ ಮಧ್ಯಪ್ರದೇಶದ ಇಂದ್ರಜೀತ್ ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ.

ಮೃತದೇಹಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನೂರಾರು ಜನರು ಆಸ್ಪತ್ರೆ ಎದುರು ಜಮಾವಣೆಗೊಂಡರು. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. , ಡಿವೈಎಸ್ಪಿ ಜೆ.ಎಸ್. ನ್ಯಾಮೇಗೌಡರ್, ಸಿಪಿಐ ಗುರು ಪಾಟೀಲ ಭೇಟಿ ನೀಡಿ ಘಟಕದ ಕಾರ್ಯ ಸ್ಥಗಿತಗೊಳಿಸಿ ಸಂಬಂಧಿಸಿದವರನ್ನು ವಿಚಾರಿಸಿದ್ದಾರೆ.‌ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ , ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ ಆಸ್ಪತ್ರೆಗೆ ಭೇಟಿ ನೀಡಿದರು.

ಸುತ್ತಮುತ್ತಲಿನ ಪರಿಸರದಲ್ಲಿ ಗ್ಯಾಸ್ ಸೋರಿಕೆ‌ ಆಗಿಲ್ಲ. ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT