<p><strong>ಬೀದರ್:</strong> ‘ಪಂಡಿತ್ ಪಂಚಾಕ್ಷರ ಗವಾಯಿಗಳು ಮತ್ತು ಪಂ.ಪುಟ್ಟರಾಜ ಕವಿ ಗವಾಯಿಗಳು ಸಂಗೀತ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅನನ್ಯವಾದದ್ದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.</p>.<p>ಲಿಂಗೈಕ್ಯ ಪಂಡಿತ್ ಪಂಚಾಕ್ಷರ ಗವಾಯಿ ಅವರ 79ನೇ ಪುಣ್ಯ ತಿಥಿ ಮತ್ತು ಪುಟ್ಟರಾಜ ಕವಿಗವಾಯಿಗಳ 13ನೇ ಪುಣ್ಯತಿಥಿ ಅಂಗವಾಗಿ ನಗರದ ಗಣೇಶ ಕಾಲೊನಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಂಗೀತ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಗವಾಯಿಗಳು ಸವಾಲನ್ನು ಮೆಟ್ಟಿ ಜೀವನವನ್ನು ಹೇಗೆ ಸಾರ್ಥಕ ಪಡಿಸಿಕೊಳ್ಳಬಹುದು ಎಂಬ ಸ್ಪಷ್ಟ ಕಲ್ಪನೆಯನ್ನು ಕಟ್ಟಿಕೊಟ್ಟಿದ್ದಾರೆ. ಅವರಿಬ್ಬರೂ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ನಮ್ಮೆಲ್ಲರ ಹೃದಯದಲ್ಲಿ ಸದಾ ನೆಲೆಸಿರುತ್ತಾರೆ ಎಂದು ತಿಳಿಸಿದರು.</p>.<p>ಸಂಸ್ಕೃತಿ, ಪರಂಪರೆ, ಸಂಪ್ರದಾಯಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಸಂಸ್ಕೃತಿ, ಸಂಸ್ಕಾರ ಉಳಿದರೆ ಮಾತ್ರ ನಮ್ಮತನ ಉಳಿಯಲು ಸಾಧ್ಯ. ವಿಜ್ಞಾನ ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ, ನಾವು ನಮ್ಮತನ ಉಳಿಸಿಕೊಳ್ಳದಿದ್ದರೆ ಬದುಕಿಗೆ ಸಾರ್ಥಕತೆ ಇರುವುದಿಲ್ಲ. ಇದಕ್ಕೆ ಸಂಸ್ಕೃತಿ, ಪರಂಪರೆಯ ಸಂರಕ್ಷಣೆ ಅತ್ಯಗತ್ಯ ಎಂದರು.</p>.<p>ಧನರಾಜ ಹಂಗರಗಿ, ಜಗನ್ನಾಥ ಹೆಬ್ಬಾಳೆ ಮತ್ತಿತರರು ಪಾಲ್ಗೊಂಡಿದ್ದರು. ಸಂಗೀತ ಕಾರ್ಯಕ್ರಮ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಪಂಡಿತ್ ಪಂಚಾಕ್ಷರ ಗವಾಯಿಗಳು ಮತ್ತು ಪಂ.ಪುಟ್ಟರಾಜ ಕವಿ ಗವಾಯಿಗಳು ಸಂಗೀತ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅನನ್ಯವಾದದ್ದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.</p>.<p>ಲಿಂಗೈಕ್ಯ ಪಂಡಿತ್ ಪಂಚಾಕ್ಷರ ಗವಾಯಿ ಅವರ 79ನೇ ಪುಣ್ಯ ತಿಥಿ ಮತ್ತು ಪುಟ್ಟರಾಜ ಕವಿಗವಾಯಿಗಳ 13ನೇ ಪುಣ್ಯತಿಥಿ ಅಂಗವಾಗಿ ನಗರದ ಗಣೇಶ ಕಾಲೊನಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಂಗೀತ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಗವಾಯಿಗಳು ಸವಾಲನ್ನು ಮೆಟ್ಟಿ ಜೀವನವನ್ನು ಹೇಗೆ ಸಾರ್ಥಕ ಪಡಿಸಿಕೊಳ್ಳಬಹುದು ಎಂಬ ಸ್ಪಷ್ಟ ಕಲ್ಪನೆಯನ್ನು ಕಟ್ಟಿಕೊಟ್ಟಿದ್ದಾರೆ. ಅವರಿಬ್ಬರೂ ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ನಮ್ಮೆಲ್ಲರ ಹೃದಯದಲ್ಲಿ ಸದಾ ನೆಲೆಸಿರುತ್ತಾರೆ ಎಂದು ತಿಳಿಸಿದರು.</p>.<p>ಸಂಸ್ಕೃತಿ, ಪರಂಪರೆ, ಸಂಪ್ರದಾಯಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಸಂಸ್ಕೃತಿ, ಸಂಸ್ಕಾರ ಉಳಿದರೆ ಮಾತ್ರ ನಮ್ಮತನ ಉಳಿಯಲು ಸಾಧ್ಯ. ವಿಜ್ಞಾನ ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ, ನಾವು ನಮ್ಮತನ ಉಳಿಸಿಕೊಳ್ಳದಿದ್ದರೆ ಬದುಕಿಗೆ ಸಾರ್ಥಕತೆ ಇರುವುದಿಲ್ಲ. ಇದಕ್ಕೆ ಸಂಸ್ಕೃತಿ, ಪರಂಪರೆಯ ಸಂರಕ್ಷಣೆ ಅತ್ಯಗತ್ಯ ಎಂದರು.</p>.<p>ಧನರಾಜ ಹಂಗರಗಿ, ಜಗನ್ನಾಥ ಹೆಬ್ಬಾಳೆ ಮತ್ತಿತರರು ಪಾಲ್ಗೊಂಡಿದ್ದರು. ಸಂಗೀತ ಕಾರ್ಯಕ್ರಮ ಜರುಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>