ಬೀದರ್: ಪಂಚಾಕ್ಷರ ಗವಾಯಿ ಅವರು ಅಂಧರು, ಅನಾಥರಿಗೆ ಸಂಗೀತ ವಿದ್ಯೆ ಧಾರೆ ಎರೆದಿದ್ದರು. ಅವರ ಬಾಳಿಗೆ ಬೆಳಕಾಗಿದ್ದರು ಎಂದು ಸಪ್ತಸ್ವರ ಸಂಗೀತ ಮಹಾವಿದ್ಯಾಲಯದ ಅಧ್ಯಕ್ಷ ಮಲ್ಲಿಕಾರ್ಜುನ ನಾಗಮಾರಪಳ್ಳಿ ಹೇಳಿದರು.
ನಗರದ ಸಪ್ತಸ್ವರ ಸಂಗೀತ ಮಹಾವಿದ್ಯಾಲಯದಲ್ಲಿ ನಡೆದ ಗಾನಯೋಗಿ ಪಂಚಾಕ್ಷರ ಗವಾಯಿ ಅವರ 77ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗವಾಯಿ ಅವರು ಸಂಗೀತವನ್ನೇ ಉಸಿರಾಗಿಸಿಕೊಂಡಿದ್ದರು. ಸಂಗೀತದ ಬೆಳವಣಿಗೆಗೆ ಶ್ರಮಿಸಿದ್ದರು ಎಂದು ತಿಳಿಸಿದರು. ಸಂಗೀತ ಪಾಠಶಾಲೆ ಮಕ್ಕಳಿಂದ ಗಾಯನ ನಡೆಯಿತು.