<p><strong>ಬೀದರ್:</strong> ಲಿಂಗತ್ವ ಅಲ್ಪಸಂಖ್ಯಾತೆ ಸುಕನ್ಯಾ ಮೇಲೆ ಹಲ್ಲೆ ನಡೆಸಿರುವುದು ಖಂಡನಾರ್ಹವಾಗಿದ್ದು, ಘಟನೆಗೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ ಸಂಘಟನೆಯ ಸದಸ್ಯ ಭೀಮ ಆಗ್ರಹಿಸಿದರು.</p>.<p>ಬೆಂಗಳೂರಿನ ಕೃಷ್ಣರಾಜಪುರ ನಿವಾಸಿ ಸುಕನ್ಯಾ ಅವರ ಮೇಲೆ ನಡೆದ ಭೀಕರ ಹಲ್ಲೆ, ಅಪಹರಣ, ಅಕ್ರಮ ಬಂಧನ ಮತ್ತು ಬಲವಂತದಿಂದ ತಲೆ ಬೋಳಿಸಿ ಹೀನ ಕೃತ್ಯ ಎಸಗಿದವರು ಮನುಷ್ಯ ಕುಲಕ್ಕೆ ಅಪಮಾನ ಮಾಡಿದ್ದಾರೆ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ನಾಗರಿಕ ಸಮಾಜದ ಸಂಘಟನೆಗಳು ಮತ್ತು ಹೋರಾಟಗಾರರ ಸಮಯೋಚಿತ ಮಧ್ಯಸ್ಥಿಕೆಯಿಂದ ಪೊಲೀಸರು ಸುಕನ್ಯಾ ಅವರನ್ನು ರಕ್ಷಿಸಿದರು. ಎಫ್ಐಆರ್ ದಾಖಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಈ ಕ್ರೂರ ಘಟನೆಯಿಂದ ಮನಸ್ಸಿಗೆ ಘಾಸಿಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಮಾತನಾಡಿ, ಸುಕನ್ಯಾ ಅವರಿಗೆ ನ್ಯಾಯ ದೊರಕಿಸಿಕೊಡಬೇಕು. ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರಿಗೆ ಸುರಕ್ಷತೆ ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಸಾಮಾಜಿಕ ಕಾರ್ಯಕರ್ತ ಜಗದೀಶ್ವರ ಬಿರಾದಾರ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗಗಳಲ್ಲಿ ವಿಶೇಷ ನೇಮಕಾತಿ, ಉದ್ಯಮಶೀಲ ಯೋಜನೆಗಳು, ಕೌಶಲ್ಯಾಭಿವೃದ್ಧಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜೀವನೋಪಾಯದ ಅವಕಾಶಗಳನ್ನು ವಿಸ್ತರಿಸಬೇಕು ಎಂದರು.</p>.<p>ಸಂಘಟನೆಯ ಸದಸ್ಯೆ ರೋಶನಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಲಿಂಗತ್ವ ಅಲ್ಪಸಂಖ್ಯಾತೆ ಸುಕನ್ಯಾ ಮೇಲೆ ಹಲ್ಲೆ ನಡೆಸಿರುವುದು ಖಂಡನಾರ್ಹವಾಗಿದ್ದು, ಘಟನೆಗೆ ಕಾರಣರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ ಸಂಘಟನೆಯ ಸದಸ್ಯ ಭೀಮ ಆಗ್ರಹಿಸಿದರು.</p>.<p>ಬೆಂಗಳೂರಿನ ಕೃಷ್ಣರಾಜಪುರ ನಿವಾಸಿ ಸುಕನ್ಯಾ ಅವರ ಮೇಲೆ ನಡೆದ ಭೀಕರ ಹಲ್ಲೆ, ಅಪಹರಣ, ಅಕ್ರಮ ಬಂಧನ ಮತ್ತು ಬಲವಂತದಿಂದ ತಲೆ ಬೋಳಿಸಿ ಹೀನ ಕೃತ್ಯ ಎಸಗಿದವರು ಮನುಷ್ಯ ಕುಲಕ್ಕೆ ಅಪಮಾನ ಮಾಡಿದ್ದಾರೆ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ನಾಗರಿಕ ಸಮಾಜದ ಸಂಘಟನೆಗಳು ಮತ್ತು ಹೋರಾಟಗಾರರ ಸಮಯೋಚಿತ ಮಧ್ಯಸ್ಥಿಕೆಯಿಂದ ಪೊಲೀಸರು ಸುಕನ್ಯಾ ಅವರನ್ನು ರಕ್ಷಿಸಿದರು. ಎಫ್ಐಆರ್ ದಾಖಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಈ ಕ್ರೂರ ಘಟನೆಯಿಂದ ಮನಸ್ಸಿಗೆ ಘಾಸಿಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಮಾತನಾಡಿ, ಸುಕನ್ಯಾ ಅವರಿಗೆ ನ್ಯಾಯ ದೊರಕಿಸಿಕೊಡಬೇಕು. ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರಿಗೆ ಸುರಕ್ಷತೆ ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಸಾಮಾಜಿಕ ಕಾರ್ಯಕರ್ತ ಜಗದೀಶ್ವರ ಬಿರಾದಾರ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗಗಳಲ್ಲಿ ವಿಶೇಷ ನೇಮಕಾತಿ, ಉದ್ಯಮಶೀಲ ಯೋಜನೆಗಳು, ಕೌಶಲ್ಯಾಭಿವೃದ್ಧಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜೀವನೋಪಾಯದ ಅವಕಾಶಗಳನ್ನು ವಿಸ್ತರಿಸಬೇಕು ಎಂದರು.</p>.<p>ಸಂಘಟನೆಯ ಸದಸ್ಯೆ ರೋಶನಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>