<p><strong>ಬಸವಕಲ್ಯಾಣ:</strong> ನಗರದ ಚೌಧರಿ ಆಸ್ಪತ್ರೆಯಲ್ಲಿನ ಸಿಟಿಸ್ಕ್ಯಾನ್ ಕೇಂದ್ರಕ್ಕೆ ಶಾಸಕ ಶರಣು ಸಲಗರ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಸರ್ಕಾರ ನಿಗದಿಪಡಿಸಿದ ದರ ಮಾತ್ರ ಪಡೆದುಕೊಳ್ಳಬೇಕು ಎಂದು ಆಸ್ಪತ್ರೆಯವರಿಗೆ ಸೂಚಿಸಿದರು.</p>.<p>‘ಬಿಪಿಎಲ್ ಪಡಿತರ ಚೀಟಿದಾರರಿಗೆ ₹1,500 ಹಾಗೂ ಎಪಿಎಲ್ ಪಡಿತರ ಚೀಟಿದಾರರಿಗೆ ₹2,500 ಮಾತ್ರ ಪಡೆದುಕೊಳ್ಳಬೇಕು. ಆದರೆ, ಹೆಚ್ಚಿನ ದರ ಪಡೆದುಕೊಳ್ಳಲಾಗುತ್ತಿದೆ ಎಂಬ ದೂರಿನನ್ವಯ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ’ ಎಂದರು.</p>.<p>ಕೊರೊನಾ ಸೋಂಕಿನಿಂದ ಆರೋಗ್ಯ, ಹಣ ಕಳೆದುಕೊಳ್ಳುತ್ತಿರುವ ಜನರಿಗೆ ಹೆಚ್ಚಿನ ಹೊರೆ ಹೊರಿಸುವುದು ನ್ಯಾಯವಲ್ಲ. ಇದರಿಂದ ಅವರ ಆತ್ಮಬಲ ಕುಗ್ಗುತ್ತದೆ’ ಎಂದು ಹೇಳಿದರು.</p>.<p>‘ನಿಗದಿಪಡಿಸಿದ ದರಪಟ್ಟಿಯನ್ನು ಕನ್ನಡ, ಇಂಗ್ಲಿಷ್, ಮರಾಠಿ ಹಾಗೂ ಹಿಂದಿಯಲ್ಲಿ ದೊಡ್ಡದಾಗಿ ಬರೆದು ಆಸ್ಪತ್ರೆ ಪ್ರವೇಶ ದ್ವಾರದ ಬಳಿ ಲಗತ್ತಿಸಬೇಕು’ ಎಂದೂ ಅವರು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ನಗರದ ಚೌಧರಿ ಆಸ್ಪತ್ರೆಯಲ್ಲಿನ ಸಿಟಿಸ್ಕ್ಯಾನ್ ಕೇಂದ್ರಕ್ಕೆ ಶಾಸಕ ಶರಣು ಸಲಗರ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಸರ್ಕಾರ ನಿಗದಿಪಡಿಸಿದ ದರ ಮಾತ್ರ ಪಡೆದುಕೊಳ್ಳಬೇಕು ಎಂದು ಆಸ್ಪತ್ರೆಯವರಿಗೆ ಸೂಚಿಸಿದರು.</p>.<p>‘ಬಿಪಿಎಲ್ ಪಡಿತರ ಚೀಟಿದಾರರಿಗೆ ₹1,500 ಹಾಗೂ ಎಪಿಎಲ್ ಪಡಿತರ ಚೀಟಿದಾರರಿಗೆ ₹2,500 ಮಾತ್ರ ಪಡೆದುಕೊಳ್ಳಬೇಕು. ಆದರೆ, ಹೆಚ್ಚಿನ ದರ ಪಡೆದುಕೊಳ್ಳಲಾಗುತ್ತಿದೆ ಎಂಬ ದೂರಿನನ್ವಯ ಆಸ್ಪತ್ರೆಗೆ ಭೇಟಿ ನೀಡಿದ್ದೇನೆ’ ಎಂದರು.</p>.<p>ಕೊರೊನಾ ಸೋಂಕಿನಿಂದ ಆರೋಗ್ಯ, ಹಣ ಕಳೆದುಕೊಳ್ಳುತ್ತಿರುವ ಜನರಿಗೆ ಹೆಚ್ಚಿನ ಹೊರೆ ಹೊರಿಸುವುದು ನ್ಯಾಯವಲ್ಲ. ಇದರಿಂದ ಅವರ ಆತ್ಮಬಲ ಕುಗ್ಗುತ್ತದೆ’ ಎಂದು ಹೇಳಿದರು.</p>.<p>‘ನಿಗದಿಪಡಿಸಿದ ದರಪಟ್ಟಿಯನ್ನು ಕನ್ನಡ, ಇಂಗ್ಲಿಷ್, ಮರಾಠಿ ಹಾಗೂ ಹಿಂದಿಯಲ್ಲಿ ದೊಡ್ಡದಾಗಿ ಬರೆದು ಆಸ್ಪತ್ರೆ ಪ್ರವೇಶ ದ್ವಾರದ ಬಳಿ ಲಗತ್ತಿಸಬೇಕು’ ಎಂದೂ ಅವರು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>