<p><strong>ಬೀದರ್:</strong> ‘ಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ಸಂಸ್ಕಾರ ಕೊಡಬೇಕು. ಮಕ್ಕಳು ಪಾಲಕರ ನಡೆ–ನುಡಿ ಅನುಕರಿಸುತ್ತಾರೆ. ಮಕ್ಕಳ ಎದುರಲ್ಲಿ ಪಾಲಕರು ಸಂಸ್ಕಾಯುತವಾಗಿ ನಡೆದುಕೊಳ್ಳಬೇಕು’ ಎಂದು ನೆರೆಯ ತೆಲಂಗಾಣದ ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ಹೇಳಿದರು.</p>.<p>ಬೀದರ್ ತಾಲ್ಲೂಕಿನ ಚಿಟ್ಟಾ ಗ್ರಾಮದಲ್ಲಿ ಶೇಷಮ್ಮಾದೇವಿಯ 3ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>‘ಪ್ರತಿ ವರ್ಷ ಜನ್ಮದಿನದ ಹೆಸರಲ್ಲಿ ದುಂದು ವೆಚ್ಚ ಮಾಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಅದರ ಬದಲಾಗಿ ನಿರ್ಗತಿಕರಿಗೆ ಅನ್ನ ದಾಸೋಹ ಮಾಡಬೇಕು. ಈ ಮೂಲಕ ಪುಣ್ಯಪ್ರಾಪ್ತಿ ಮಾಡಿಕೊಳ್ಳಬೇಕು’ ಎಂದರು.</p>.<p>ಗ್ರಾಮದ ಮುಖಂಡರಾದ ಹಣಮಂತ ಪಾಟೀಲ ಚಿಟ್ಟಾ, ಶಿವಾಜಿ ಪಾಟೀಲ, ವೆಂಕಟರಾವ್ ಪಾಟೀಲ, ಅಣ್ಣರಾವ್ ಪಾಟೀಲ, ನಾರಾಯಣರಾವ್ ಪಾಪೈನೋರ್, ಕಾಶಿಲಿಂಗ ಅಗ್ರಹಾರ, ಚಾಂದಪಾಶಾ ಇದ್ದರು.</p>.<p>ಮೆರವಣಿಗೆ: ಇದಕ್ಕೂ ಮೊದಲು ಗ್ರಾಮದ ಜೈ ಭವಾನಿ ಮಾತಾ ದೇವಸ್ಥಾನದಿಂದ ಶೇಷಮ್ಮಾದೇವಿ ಮಂದಿರದ ವರೆಗೆ ಬಸವಲಿಂಗ ಅವಧೂತರ ಬೆಳ್ಳಿರಥದಲ್ಲಿ ಮೆರವಣಿಗೆ ನಡೆಯಿತು.<br />ಕುಂಭ ಕಳಶ ಹೊತ್ತ ಮಹಿಳೆಯರು, ಮಕ್ಕಳ ಕೋಲಾಟ, ಹಲಿಗೆ ಕುಣಿತ ಗಮನ ಸೆಳೆಯಿತು. ಗ್ರಾಮದ ಜನ ಭಕ್ತಿಯಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಮಕ್ಕಳಿಗೆ ಬಾಲ್ಯದಲ್ಲೇ ಉತ್ತಮ ಸಂಸ್ಕಾರ ಕೊಡಬೇಕು. ಮಕ್ಕಳು ಪಾಲಕರ ನಡೆ–ನುಡಿ ಅನುಕರಿಸುತ್ತಾರೆ. ಮಕ್ಕಳ ಎದುರಲ್ಲಿ ಪಾಲಕರು ಸಂಸ್ಕಾಯುತವಾಗಿ ನಡೆದುಕೊಳ್ಳಬೇಕು’ ಎಂದು ನೆರೆಯ ತೆಲಂಗಾಣದ ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ಹೇಳಿದರು.</p>.<p>ಬೀದರ್ ತಾಲ್ಲೂಕಿನ ಚಿಟ್ಟಾ ಗ್ರಾಮದಲ್ಲಿ ಶೇಷಮ್ಮಾದೇವಿಯ 3ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.</p>.<p>‘ಪ್ರತಿ ವರ್ಷ ಜನ್ಮದಿನದ ಹೆಸರಲ್ಲಿ ದುಂದು ವೆಚ್ಚ ಮಾಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಅದರ ಬದಲಾಗಿ ನಿರ್ಗತಿಕರಿಗೆ ಅನ್ನ ದಾಸೋಹ ಮಾಡಬೇಕು. ಈ ಮೂಲಕ ಪುಣ್ಯಪ್ರಾಪ್ತಿ ಮಾಡಿಕೊಳ್ಳಬೇಕು’ ಎಂದರು.</p>.<p>ಗ್ರಾಮದ ಮುಖಂಡರಾದ ಹಣಮಂತ ಪಾಟೀಲ ಚಿಟ್ಟಾ, ಶಿವಾಜಿ ಪಾಟೀಲ, ವೆಂಕಟರಾವ್ ಪಾಟೀಲ, ಅಣ್ಣರಾವ್ ಪಾಟೀಲ, ನಾರಾಯಣರಾವ್ ಪಾಪೈನೋರ್, ಕಾಶಿಲಿಂಗ ಅಗ್ರಹಾರ, ಚಾಂದಪಾಶಾ ಇದ್ದರು.</p>.<p>ಮೆರವಣಿಗೆ: ಇದಕ್ಕೂ ಮೊದಲು ಗ್ರಾಮದ ಜೈ ಭವಾನಿ ಮಾತಾ ದೇವಸ್ಥಾನದಿಂದ ಶೇಷಮ್ಮಾದೇವಿ ಮಂದಿರದ ವರೆಗೆ ಬಸವಲಿಂಗ ಅವಧೂತರ ಬೆಳ್ಳಿರಥದಲ್ಲಿ ಮೆರವಣಿಗೆ ನಡೆಯಿತು.<br />ಕುಂಭ ಕಳಶ ಹೊತ್ತ ಮಹಿಳೆಯರು, ಮಕ್ಕಳ ಕೋಲಾಟ, ಹಲಿಗೆ ಕುಣಿತ ಗಮನ ಸೆಳೆಯಿತು. ಗ್ರಾಮದ ಜನ ಭಕ್ತಿಯಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>