<p><strong>ಬೀದರ್:</strong> ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಬೇಕು ಎಂದು ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ ಹೇಳಿದರು.</p>.<p>ಯೋಗ ವೇದಾಂತ ಸೇವಾ ಸಮಿತಿಯ ವತಿಯಿಂದ ಇಲ್ಲಿಯ ವಿ.ಕೆ. ಇಂಟರ್ನ್ಯಾಷನಲ್ ಶಾಲೆಯಲ್ಲಿ ಆಯೋಜಿಸಿದ್ದ ತಂದೆ-ತಾಯಿಗಳ ಪೂಜೆ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತಂದೆ-ತಾಯಿ ಮಕ್ಕಳಿಗೆ ಹೆಚ್ಚಿನ ಸಮಯ ನೀಡಬೇಕು. ಅವರನ್ನು ಸಮಾಜಕ್ಕೆ ಕೊಡುಗೆ ನೀಡುವ ಪ್ರಜೆಯಾಗಿ ರೂಪಿಸಬೇಕು ಎಂದು ಸಲಹೆ ಮಾಡಿದರು.</p>.<p>ಭಾರತೀಯ ಸಂಸ್ಕೃತಿ ಅನುಸರಿಸುವವರನ್ನು ಇಡೀ ವಿಶ್ವವೇ ಗೌರವಿಸುತ್ತದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಪ್ರಕಾಶ ಜಿ. ಹೇಳಿದರು.</p>.<p>ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರೇಮಿಗಳ ದಿನದಂದು ತಂದೆ-ತಾಯಿಗಳ ಪೂಜೆ ದಿನ ಆಚರಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು.</p>.<p>ಯೋಗ ವೇದಾಂತ ಸೇವಾ ಸಮಿತಿಯ ಡಾ. ಸುರೇಂದ್ರ ರೋಡೆ ಮಾತನಾಡಿದರು. ಮಕ್ಕಳು ಪಾಲಕರ ಪಾದಪೂಜೆ ಮಾಡಿದರು. ಡಾ. ಲೋಕೇಶ ಹಿರೇಮಠ, ಸಂಜು ಪಾಟೀಲ ನ್ಯಾಮತಾಬಾದ್, ಸಿದ್ದು ಮಳಖೇಡ, ಅಶೋಕ ದಾರಾ, ದಿಲೀಪ್ ಗಾದಗೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಬೇಕು ಎಂದು ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ ಹೇಳಿದರು.</p>.<p>ಯೋಗ ವೇದಾಂತ ಸೇವಾ ಸಮಿತಿಯ ವತಿಯಿಂದ ಇಲ್ಲಿಯ ವಿ.ಕೆ. ಇಂಟರ್ನ್ಯಾಷನಲ್ ಶಾಲೆಯಲ್ಲಿ ಆಯೋಜಿಸಿದ್ದ ತಂದೆ-ತಾಯಿಗಳ ಪೂಜೆ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತಂದೆ-ತಾಯಿ ಮಕ್ಕಳಿಗೆ ಹೆಚ್ಚಿನ ಸಮಯ ನೀಡಬೇಕು. ಅವರನ್ನು ಸಮಾಜಕ್ಕೆ ಕೊಡುಗೆ ನೀಡುವ ಪ್ರಜೆಯಾಗಿ ರೂಪಿಸಬೇಕು ಎಂದು ಸಲಹೆ ಮಾಡಿದರು.</p>.<p>ಭಾರತೀಯ ಸಂಸ್ಕೃತಿ ಅನುಸರಿಸುವವರನ್ನು ಇಡೀ ವಿಶ್ವವೇ ಗೌರವಿಸುತ್ತದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಪ್ರಕಾಶ ಜಿ. ಹೇಳಿದರು.</p>.<p>ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರೇಮಿಗಳ ದಿನದಂದು ತಂದೆ-ತಾಯಿಗಳ ಪೂಜೆ ದಿನ ಆಚರಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು.</p>.<p>ಯೋಗ ವೇದಾಂತ ಸೇವಾ ಸಮಿತಿಯ ಡಾ. ಸುರೇಂದ್ರ ರೋಡೆ ಮಾತನಾಡಿದರು. ಮಕ್ಕಳು ಪಾಲಕರ ಪಾದಪೂಜೆ ಮಾಡಿದರು. ಡಾ. ಲೋಕೇಶ ಹಿರೇಮಠ, ಸಂಜು ಪಾಟೀಲ ನ್ಯಾಮತಾಬಾದ್, ಸಿದ್ದು ಮಳಖೇಡ, ಅಶೋಕ ದಾರಾ, ದಿಲೀಪ್ ಗಾದಗೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>