<p><strong>ಬಸವಕಲ್ಯಾಣ:</strong> ‘ಬುಡಕಟ್ಟು ಸಮುದಾಯಕ್ಕೆ ಸರ್ಕಾರದ ವಿವಿಧ ಸೌಲಭ್ಯ ಒದಗಿಸಲು ಗ್ರಾಮ ಪಂಚಾಯಿತಿಯವರು ಹಾಗೂ ವಿವಿಧ ಇಲಾಖೆಯವರು ಪ್ರಯತ್ನಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ರಮೇಶ ಸುಲ್ಫಿ ಸಲಹೆ ನೀಡಿದ್ದಾರೆ.</p>.<p>ತಾಲ್ಲೂಕಿನ ಪ್ರತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾನಾಪುರ (ಕೆ) ವಾಡಿಯಲ್ಲಿ ಗುರುವಾರ ನಡೆದ ಬುಡಕಟ್ಟು ಸಮುದಾಯದ ಸೌಲಭ್ಯಗಳ ಅರಿವು ಮೂಡಿಸುವ ‘ಗ್ರಾಮ ಉತ್ಕರ್ಷ ಅಭಿಯಾನ’ಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದುರ್ಗಮ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಜನರಿಗೆ ರಸ್ತೆ, ಶುದ್ಧ ಕುಡಿಯುವ ನೀರು, ಆಸ್ಪತ್ರೆ, ದೂರವಾಣಿ ಸಂಪರ್ಕ, ವಿದ್ಯುಚ್ಛಕ್ತಿ ಮತ್ತು ಮನೆಗಳನ್ನು ಒದಗಿಸಿ ಕೊಡುವುದೇ ಅಭಿಯಾನದ ಉದ್ದೇಶವಾಗಿದೆ. ಮಿರ್ಜಾಪುರ, ಗೊಗ್ಗಾ, ಕೌಡಿಯಾಳ, ಖೇರ್ಡಾ ಗ್ರಾಮಗಳಲ್ಲಿಯೂ ಅಭಿಯಾನ ನಡೆಯಲಿದೆ’ ಎಂದರು.</p>.<p>ತಾಲ್ಲೂಕು ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಮೋನಮ್ಮ ಮಾತನಾಡಿ, ‘ಇಲಾಖೆಗಳ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ದೂರು ನೀಡಿ ನ್ಯಾಯ ಪಡೆಯಬಹುದಾಗಿದೆ’ ಎಂದರು.</p>.<p>ಪಿಡಿಒ ಚಂದ್ರಾಮ ಧೂಳಖೇಡ, ‘ಗ್ರಾಮ ಪಂಚಾಯಿತಿ ವತಿಯಿಂದ ಅಗತ್ಯ ಸೌಲಭ್ಯ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಭಾಗಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ‘ಬುಡಕಟ್ಟು ಸಮುದಾಯಕ್ಕೆ ಸರ್ಕಾರದ ವಿವಿಧ ಸೌಲಭ್ಯ ಒದಗಿಸಲು ಗ್ರಾಮ ಪಂಚಾಯಿತಿಯವರು ಹಾಗೂ ವಿವಿಧ ಇಲಾಖೆಯವರು ಪ್ರಯತ್ನಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ರಮೇಶ ಸುಲ್ಫಿ ಸಲಹೆ ನೀಡಿದ್ದಾರೆ.</p>.<p>ತಾಲ್ಲೂಕಿನ ಪ್ರತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಖಾನಾಪುರ (ಕೆ) ವಾಡಿಯಲ್ಲಿ ಗುರುವಾರ ನಡೆದ ಬುಡಕಟ್ಟು ಸಮುದಾಯದ ಸೌಲಭ್ಯಗಳ ಅರಿವು ಮೂಡಿಸುವ ‘ಗ್ರಾಮ ಉತ್ಕರ್ಷ ಅಭಿಯಾನ’ಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದುರ್ಗಮ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಜನರಿಗೆ ರಸ್ತೆ, ಶುದ್ಧ ಕುಡಿಯುವ ನೀರು, ಆಸ್ಪತ್ರೆ, ದೂರವಾಣಿ ಸಂಪರ್ಕ, ವಿದ್ಯುಚ್ಛಕ್ತಿ ಮತ್ತು ಮನೆಗಳನ್ನು ಒದಗಿಸಿ ಕೊಡುವುದೇ ಅಭಿಯಾನದ ಉದ್ದೇಶವಾಗಿದೆ. ಮಿರ್ಜಾಪುರ, ಗೊಗ್ಗಾ, ಕೌಡಿಯಾಳ, ಖೇರ್ಡಾ ಗ್ರಾಮಗಳಲ್ಲಿಯೂ ಅಭಿಯಾನ ನಡೆಯಲಿದೆ’ ಎಂದರು.</p>.<p>ತಾಲ್ಲೂಕು ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಮೋನಮ್ಮ ಮಾತನಾಡಿ, ‘ಇಲಾಖೆಗಳ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ದೂರು ನೀಡಿ ನ್ಯಾಯ ಪಡೆಯಬಹುದಾಗಿದೆ’ ಎಂದರು.</p>.<p>ಪಿಡಿಒ ಚಂದ್ರಾಮ ಧೂಳಖೇಡ, ‘ಗ್ರಾಮ ಪಂಚಾಯಿತಿ ವತಿಯಿಂದ ಅಗತ್ಯ ಸೌಲಭ್ಯ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಭಾಗಮ್ಮ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>