<p><strong>ಹುಲಸೂರ: </strong>‘ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕೂಲಿ ಕೆಲಸ ನೀಡಬೇಕು’ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹೀರಾ ನಸೀಂ ಹೇಳಿದರು.</p>.<p>ಸಚಿವ ಪ್ರಭು ಚವಾಣ್ ಅವರೊಂದಿಗೆ ಶನಿವಾರ ಪಟ್ಟಣದಲ್ಲಿ ರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿಯ ನರೇಗಾ ಸಾಹಯಕ ನಿರ್ದೇಶಕ ಜಯಪ್ರಕಾಶ್ ಚವ್ಹಾಣ ಅವರೊಂದಿಗೆ ಸೂಚಿಸಿದರು.</p>.<p>‘ವೈಯಕ್ತಿಕ ಕಾಮಗಾರಿಗಳಾದ ತೆರೆದಬಾವಿ, ಬದು ನಿರ್ಮಾಣ, ಜಾನುವಾರು ಕೊಟ್ಟಿಗೆ ನಿರ್ಮಿಸುವತ್ತ ಗಮನ ಹರಿಸಬೇಕು. ಆದ್ಯತೆ ಮೇರೆಗೆ ಕೆಲಸ ನೀಡಬೇಕು’ ಎಂದು ಸೂಚಿಸಿದರು.</p>.<p>ತಾ.ಪಂ ಇಒ ಖಾಲಿದ್ ಅಲಿ, ಹುಲಸೂರ ಪಿಡಿಒ ಭೀಮಶೆಪ್ಪ ದಂಡಿನ್, ತಾಲ್ಲೂಕು ತಾಂತ್ರಿಕ ಸಂಯೋಜಕ ಮಲ್ಲಿಕಾರ್ಜುನ ನಾವದಗಿ ಹಾಗೂ ತಾಲ್ಲೂಕು ಐಇಸಿ ಸಂಯೋಜಕ ಗಣಪತಿ ಹರಕುಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ: </strong>‘ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ನರೇಗಾ ಯೋಜನೆಯಡಿ ಕಾರ್ಮಿಕರಿಗೆ ಆದ್ಯತೆ ಮೇರೆಗೆ ಕೂಲಿ ಕೆಲಸ ನೀಡಬೇಕು’ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹೀರಾ ನಸೀಂ ಹೇಳಿದರು.</p>.<p>ಸಚಿವ ಪ್ರಭು ಚವಾಣ್ ಅವರೊಂದಿಗೆ ಶನಿವಾರ ಪಟ್ಟಣದಲ್ಲಿ ರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿಯ ನರೇಗಾ ಸಾಹಯಕ ನಿರ್ದೇಶಕ ಜಯಪ್ರಕಾಶ್ ಚವ್ಹಾಣ ಅವರೊಂದಿಗೆ ಸೂಚಿಸಿದರು.</p>.<p>‘ವೈಯಕ್ತಿಕ ಕಾಮಗಾರಿಗಳಾದ ತೆರೆದಬಾವಿ, ಬದು ನಿರ್ಮಾಣ, ಜಾನುವಾರು ಕೊಟ್ಟಿಗೆ ನಿರ್ಮಿಸುವತ್ತ ಗಮನ ಹರಿಸಬೇಕು. ಆದ್ಯತೆ ಮೇರೆಗೆ ಕೆಲಸ ನೀಡಬೇಕು’ ಎಂದು ಸೂಚಿಸಿದರು.</p>.<p>ತಾ.ಪಂ ಇಒ ಖಾಲಿದ್ ಅಲಿ, ಹುಲಸೂರ ಪಿಡಿಒ ಭೀಮಶೆಪ್ಪ ದಂಡಿನ್, ತಾಲ್ಲೂಕು ತಾಂತ್ರಿಕ ಸಂಯೋಜಕ ಮಲ್ಲಿಕಾರ್ಜುನ ನಾವದಗಿ ಹಾಗೂ ತಾಲ್ಲೂಕು ಐಇಸಿ ಸಂಯೋಜಕ ಗಣಪತಿ ಹರಕುಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>