ನಂತರ ಮಾತನಾಡಿದ ವೈಜನಾಥ ವಡ್ಡೆ,‘ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ತಾಲ್ಲೂಕಿನಲ್ಲಿ ನಿರೀಕ್ಷಿಸಿದಷ್ಟು ಯಶಸ್ವಿಯಾಗಿಲ್ಲ. ರೈತರು ನೋಂದಾಯಿಸಿದ್ದರೂ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ನೋಂದಾಯಿಸಿಕೊಳ್ಳುವಾಗ ತೋರಿದ ಆಸಕ್ತಿ ವಿಮೆ ಪರಿಹಾರ ನೀಡುವಲ್ಲಿ ತೋರುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.