‘ಲಿಂಗಾಯತ ಸಮುದಾಯದ ಗೋಪಾಲರಾವ್ ಮುಡಬಿ, ಬಸವರಾಜ ಪಾಟೀಲ ಹುಮನಾಬಾದ್, ಬಸವರಾಜ ಬುಳ್ಳಾ, ವಿ.ಕೆ. ಪಾಟೀಲ, ಕುರುಬ ಸಮುದಾಯದ ಮಾಣಿಕರಾವ್ ಫುಲೇಕರ್, ಬ್ರಾಹ್ಮಣ ಸಮುದಾಯದ ಶ್ರೀನಿವಾಸರಾವ್ ಕಾಶೆಂಪೂರ್, ಕೋಮಟಿ ಸಮುದಾಯದ ಚಂದ್ರಕಾಂತ ಸಿಂದೋಲ್ ಹಾಗೂ ಮುಸ್ಲಿಂ ಸಮುದಾಯದ ಕಾಜಿ ಅರ್ಶದ್ ಅಲಿ ಅವರು ಈವರೆಗೆ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹಾಲಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಆದರೆ, ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದ ಯಾರೊಬ್ಬರಿಗೂ ಈ ಹುದ್ದೆ ದೊರೆತಿಲ್ಲ’ ಎಂದು ಹೇಳಿದ್ದಾರೆ.