ನೂತನ ಅನುಭವ ಮಂಟಪದ ಕಟ್ಟಡ ನಿರ್ಮಾಣ ಸಂಬಂಧ ಈಗಾಗಲೇ ಟೆಂಡರ್ ಕರೆದಿರುವ ಕುರಿತಂತೆ ಮಾತನಾಡಿದ ಅವರು, ‘ಭೂಸ್ವಾಧೀನ ಆಗದೆ ವಿಸ್ತೃತ ಯೋಜನಾ ವರದಿ-ಡಿಪಿಆರ್ ಅನುಮೋದನೆ ಅಪೂರ್ಣವಾಗುತ್ತದೆ. ಹೀಗಾಗಿ ಯಾವುದೇ ಅಡೆತಡೆ, ವಿಳಂಬ ಇಲ್ಲದೆ ಅನುಭವ ಮಂಟಪ ಸಾಕಾರವಾಗಲು ತಕ್ಷಣವೇ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ತಕ್ಷಣವೇ ಡಿಪಿಆರ್ ಅನುಮೋದನೆಗೆ ತಜ್ಞರ ಸಮಿತಿ ರಚಿಸಬೇಕು’ ಎಂದು ಸಲಹೆ ನೀಡಿದರು.