<p>ಬೀದರ್: ಗೊಂಡ ಸಮುದಾಯಕ್ಕೆ ಎಸ್.ಟಿ. ಗೊಂಡ ಪರ್ಯಾಯ ಪದವಾಗಿ ಪರಿಗಣಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ ಮುಂಡಾ ಹೇಳಿದರು.</p>.<p><br />ನವದೆಹಲಿಯಲ್ಲಿ ಅವರನ್ನು ಭೇಟಿ ಮಾಡಿದ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರ ನೇತೃತ್ವದ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಗೊಂಡ ಸಮುದಾಯದ ಮುಖಂಡರ ನಿಯೋಗಕ್ಕೆ ಅವರು ಈ ಭರವಸೆ ನೀಡಿದರು.</p>.<p><br />ಅಧಿಕಾರಿಗಳ ಜತೆ ಈ ಸಂಬಂಧ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.</p>.<p>ಎಸ್.ಟಿ. ಗೊಂಡ ಹಾಗೂ ಕುರುಬ ಸಮುದಾಯದಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಕುರುಬ ಸಮುದಾಯದವರನ್ನು ಎಸ್.ಟಿ. ಗೊಂಡ ಪರ್ಯಾಯ ಪದಕ್ಕೆ ಪರಿಗಣಿಸದ ಕಾರಣ ಸಮಾಜದವರು ಶಿಕ್ಷಣ, ಉದ್ಯೋಗದ ಸಂದರ್ಭದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಖೂಬಾ ಅವರು ಮುಂಡಾ ಅವರಿಗೆ ಮನವರಿಕೆ ಮಾಡಿದರು.</p>.<p><br />ಕುರುಬ ಸಮುದಾಯಕ್ಕೆ ಎಸ್.ಟಿ. ಗೊಂಡ ಪರ್ಯಾಯ ಪದವಾಗಿ ಪರಿಗಣಿಸಬೇಕು. ಈ ಕುರಿತು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು. ಇದಕ್ಕೆ ಮುಂಡಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪೂರೆ, ಶಾಸಕ ಬಂಡೆಪ್ಪ ಕಾಶೆಂಪೂರ, ಗೊಂಡ ಸಮುದಾಯದ ಪ್ರಮುಖರಾದ ಅಮೃತರಾವ್ ಚಿಮಕೋಡೆ, ಮಹಾಂತೇಶ ಕೌಜಲಗಿ, ಬಸವರಾಜ ಮಾಳಗೆ, ಧರ್ಮಣ್ಣ ದೊಡ್ಡಮನಿ, ಪಂಡಿತ ಚಿದ್ರಿ, ಎಂ.ಎಸ್. ಕಟಗಿ ನಿಯೋಗದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಗೊಂಡ ಸಮುದಾಯಕ್ಕೆ ಎಸ್.ಟಿ. ಗೊಂಡ ಪರ್ಯಾಯ ಪದವಾಗಿ ಪರಿಗಣಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ ಮುಂಡಾ ಹೇಳಿದರು.</p>.<p><br />ನವದೆಹಲಿಯಲ್ಲಿ ಅವರನ್ನು ಭೇಟಿ ಮಾಡಿದ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರ ನೇತೃತ್ವದ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಗೊಂಡ ಸಮುದಾಯದ ಮುಖಂಡರ ನಿಯೋಗಕ್ಕೆ ಅವರು ಈ ಭರವಸೆ ನೀಡಿದರು.</p>.<p><br />ಅಧಿಕಾರಿಗಳ ಜತೆ ಈ ಸಂಬಂಧ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.</p>.<p>ಎಸ್.ಟಿ. ಗೊಂಡ ಹಾಗೂ ಕುರುಬ ಸಮುದಾಯದಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಕುರುಬ ಸಮುದಾಯದವರನ್ನು ಎಸ್.ಟಿ. ಗೊಂಡ ಪರ್ಯಾಯ ಪದಕ್ಕೆ ಪರಿಗಣಿಸದ ಕಾರಣ ಸಮಾಜದವರು ಶಿಕ್ಷಣ, ಉದ್ಯೋಗದ ಸಂದರ್ಭದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಖೂಬಾ ಅವರು ಮುಂಡಾ ಅವರಿಗೆ ಮನವರಿಕೆ ಮಾಡಿದರು.</p>.<p><br />ಕುರುಬ ಸಮುದಾಯಕ್ಕೆ ಎಸ್.ಟಿ. ಗೊಂಡ ಪರ್ಯಾಯ ಪದವಾಗಿ ಪರಿಗಣಿಸಬೇಕು. ಈ ಕುರಿತು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು. ಇದಕ್ಕೆ ಮುಂಡಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪೂರೆ, ಶಾಸಕ ಬಂಡೆಪ್ಪ ಕಾಶೆಂಪೂರ, ಗೊಂಡ ಸಮುದಾಯದ ಪ್ರಮುಖರಾದ ಅಮೃತರಾವ್ ಚಿಮಕೋಡೆ, ಮಹಾಂತೇಶ ಕೌಜಲಗಿ, ಬಸವರಾಜ ಮಾಳಗೆ, ಧರ್ಮಣ್ಣ ದೊಡ್ಡಮನಿ, ಪಂಡಿತ ಚಿದ್ರಿ, ಎಂ.ಎಸ್. ಕಟಗಿ ನಿಯೋಗದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>