ಬಸವಕಲ್ಯಾಣ: ತಾಲ್ಲೂಕಿನ ಬಟಗೇರಾದಲ್ಲಿ ಗೋಣಿರುದ್ರೇಶ್ವರ ದೇವಸ್ಥಾನದ ಜಾತ್ರೆಯ ಪ್ರಯುಕ್ತ ಬುಧವಾರ ರಥೋತ್ಸವ ಸಂಭ್ರಮದಿಂದ ಜರುಗಿತು.
ಗ್ರಾಮದಲ್ಲಿ ಪಲ್ಲಕ್ಕಿ ಮೆರವಣಿಗೆ ನಡೆಸಿದ ನಂತರ ಸಂಜೆ ದೇವಸ್ಥಾನದ ಮುಂಭಾಗದಲ್ಲಿ ಜಯಘೋಷದ ಮಧ್ಯೆ ರಥ ಎಳೆಯಲಾಯಿತು. ವಾದ್ಯ ಮೇಳದವರು, ಪುರವಂತರು, ಭಜನಾ ತಂಡದವರು ಪಾಲ್ಗೊಂಡಿದ್ದರು. ರಥ ಎಳೆಯುವಾಗ ಭಕ್ತರು ರಥದ ಮೇಲೆ ಹಣ್ಣು, ನಾಣ್ಯ ಎಸೆದು ಭಕ್ತಿಯಿಂದ ನಮಿಸಿದರು.
ಪುರವಂತ ಶ್ರೀಮಂತ ಅಟ್ಟೂರ್ ಅವರ ಪುರವಂತ ಪ್ರದರ್ಶನ ಗಮನ ಸೆಳೆಯಿತು. ಗುರುಲಿಂಗಯ್ಯ ಶಾಸ್ತ್ರಿ ಹೂವಿನಹಳ್ಳಿ ಅವರು ಪೂಜೆ ನೆರವೆರಿಸಿ, ರಥ ಎಳೆಯುವುದಕ್ಕೆ ಚಾಲನೆ ನೀಡಿದರು. ಯುವಕರು ಉತ್ಸಾಹದಿಂದ ರಥ ಎಳೆದರು. ನಂತರ ಭಜನೆ, ಜಾಗರಣೆ ನಡೆಯಿತು. ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.