<p>ಭಾಲ್ಕಿ: ‘ಸ್ಪರ್ಧಾತ್ಮಕ ಯುಗದಲ್ಲಿ ಜಯಶಾಲಿಯಾಗಲು ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನ ಮಾಡಿ ಹೆತ್ತವರ ಕನಸು ನನಸು ಮಾಡಬೇಕು. ನೆಮ್ಮದಿ ಬದುಕಿಗಾಗಿ ಸಂಸ್ಕಾರಯುತ ಗುಣಮಟ್ಟದ ಶಿಕ್ಷಣ ನೀಡುವುದು ಅಗತ್ಯ’ ಎಂದು ಸತ್ಯನಿಕೇತನ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸೂರ್ಯಕಾಂತ ಭಂಗೂರ ಅಭಿಪ್ರಾಯಪಟ್ಟರು.</p>.<p>ಸತ್ಯನಿಕೇತನ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಬಿ.ಎ, ಬಿ.ಕಾಂ, ಬಿ.ಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಇಂದಿನ ಆಧುನಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೇ ಸದ್ಗುಣಗಳನ್ನು ಅಳವಡಿಸಿಕೊಂಡು ಆರೋಗ್ಯ ಭಾರತ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.</p>.<p>ಶಿವಾನಂದ ಗುಂದಗಿ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಶಂಭುಲಿಂಗ ಕಾಮಣ್ಣ ಹಾಗೂ ಪ್ರಾಚಾರ್ಯ ಅಶೋಕ ರಾಜೋಳೆ ಮಾತನಾಡಿದರು.</p>.<p>ಸಂಸ್ಥೆ ಅಧ್ಯಕ್ಷ ಶರದ ಸಿರ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.</p>.<p>ಪ್ರಾಚಾರ್ಯ ಜೈಕಾಂತ ಗಂಗೂಜಿ , ರಮೇಶ ಗುನ್ನಾಳೆ, ಬಿ.ಆರ್.ಕಾಗೆ, ಶಿವರಾಜ ಗಾದಗೆ ಅವರು ಈ ವೇಳೆ ಇದ್ದರು.</p>.<p>ಪ್ರಾಚಾರ್ಯ ರಾಜಕುಮಾರ ಎಚ್.ಕೆ.ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವಿಜಯಲಕ್ಷ್ಮೀ ಸ್ವಾಮಿ ಸ್ವಾಗತಿಸಿದರು.</p>.<p>ಮಲ್ಲಮ್ಮ ಟಪಗೆ, ರಾಠೋಡ ವರದಿ ವಾಚನ ಮಾಡಿದರು. ಮಹೇಶ ನಿರೂಪಿಸಿದರು. ಅನಿತಾ ಕಮಲಾಪುರೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘ಸ್ಪರ್ಧಾತ್ಮಕ ಯುಗದಲ್ಲಿ ಜಯಶಾಲಿಯಾಗಲು ವಿದ್ಯಾರ್ಥಿಗಳು ಆಸಕ್ತಿಯಿಂದ ಅಧ್ಯಯನ ಮಾಡಿ ಹೆತ್ತವರ ಕನಸು ನನಸು ಮಾಡಬೇಕು. ನೆಮ್ಮದಿ ಬದುಕಿಗಾಗಿ ಸಂಸ್ಕಾರಯುತ ಗುಣಮಟ್ಟದ ಶಿಕ್ಷಣ ನೀಡುವುದು ಅಗತ್ಯ’ ಎಂದು ಸತ್ಯನಿಕೇತನ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸೂರ್ಯಕಾಂತ ಭಂಗೂರ ಅಭಿಪ್ರಾಯಪಟ್ಟರು.</p>.<p>ಸತ್ಯನಿಕೇತನ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಬಿ.ಎ, ಬಿ.ಕಾಂ, ಬಿ.ಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಇಂದಿನ ಆಧುನಿಕ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಪೈಪೋಟಿ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೇ ಸದ್ಗುಣಗಳನ್ನು ಅಳವಡಿಸಿಕೊಂಡು ಆರೋಗ್ಯ ಭಾರತ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.</p>.<p>ಶಿವಾನಂದ ಗುಂದಗಿ, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಪ್ರೊ.ಶಂಭುಲಿಂಗ ಕಾಮಣ್ಣ ಹಾಗೂ ಪ್ರಾಚಾರ್ಯ ಅಶೋಕ ರಾಜೋಳೆ ಮಾತನಾಡಿದರು.</p>.<p>ಸಂಸ್ಥೆ ಅಧ್ಯಕ್ಷ ಶರದ ಸಿರ್ಸೆ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.</p>.<p>ಪ್ರಾಚಾರ್ಯ ಜೈಕಾಂತ ಗಂಗೂಜಿ , ರಮೇಶ ಗುನ್ನಾಳೆ, ಬಿ.ಆರ್.ಕಾಗೆ, ಶಿವರಾಜ ಗಾದಗೆ ಅವರು ಈ ವೇಳೆ ಇದ್ದರು.</p>.<p>ಪ್ರಾಚಾರ್ಯ ರಾಜಕುಮಾರ ಎಚ್.ಕೆ.ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವಿಜಯಲಕ್ಷ್ಮೀ ಸ್ವಾಮಿ ಸ್ವಾಗತಿಸಿದರು.</p>.<p>ಮಲ್ಲಮ್ಮ ಟಪಗೆ, ರಾಠೋಡ ವರದಿ ವಾಚನ ಮಾಡಿದರು. ಮಹೇಶ ನಿರೂಪಿಸಿದರು. ಅನಿತಾ ಕಮಲಾಪುರೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>