<p>ಬೀದರ್: ಜೇನು ಕೃಷಿಯಿಂದ ರೈತರು ಉತ್ತಮ ಆದಾಯ ಪಡೆಯಬಹುದು ಎಂದು ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ವಿ. ಸಂತೋಷಕುಮಾರ ಹೇಳಿದರು.</p>.<p>ಇಲ್ಲಿಯ ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತರಿಗೆ ಆಯೋಜಿಸಿದ್ದ ಜೇನು ಕೃಷಿ ತರಬೇತಿ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಜೇನು ಹಲವು ವಿಧದಿಂದ ಉಪಕಾರಿಯಾಗಿದೆ. ಜೇನು ತುಪ್ಪ, ಜೇನು ಮೇಣ, ರಾಜಶಾಹಿರಸಗಳನ್ನು ನೇರವಾಗಿ ಮಾರಾಟ ಮಾಡಬಹುದು. ಪರಾಗ ಸ್ಪರ್ಶದಿಂದ ಬೆಳೆಗಳ ಅಧಿಕ ಇಳುವರಿ, ಜೈವಿಕ ಪರಿಸರ ನಿರ್ಮಾಣ ಮೊದಲಾದ ಪ್ರಯೋಜನಗಳು ಇವೆ ಎಂದು ತಿಳಿಸಿದರು.</p>.<p>ಬೆಂಗಳೂರಿನ ಎಂ.ಸಿ.ಕೆ.ಎಸ್. ಫೌಂಡೇಷನ್ನ ಲೋಕೇಶ, ತರಬೇತುದಾರ ಸುರೇಶ ಉಪಸ್ಥಿತರಿದ್ದರು.</p>.<p>ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಮಹಾಲಿಂಗ, ನಾಗಶೆಟ್ಟಿ ಘೋಡಂಪಳ್ಳಿ ನಿರೂಪಿಸಿದರು. ಅನಿಲ್ ಪರೆಶನ್ನೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಜೇನು ಕೃಷಿಯಿಂದ ರೈತರು ಉತ್ತಮ ಆದಾಯ ಪಡೆಯಬಹುದು ಎಂದು ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ವಿ. ಸಂತೋಷಕುಮಾರ ಹೇಳಿದರು.</p>.<p>ಇಲ್ಲಿಯ ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ರೈತರಿಗೆ ಆಯೋಜಿಸಿದ್ದ ಜೇನು ಕೃಷಿ ತರಬೇತಿ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ಜೇನು ಹಲವು ವಿಧದಿಂದ ಉಪಕಾರಿಯಾಗಿದೆ. ಜೇನು ತುಪ್ಪ, ಜೇನು ಮೇಣ, ರಾಜಶಾಹಿರಸಗಳನ್ನು ನೇರವಾಗಿ ಮಾರಾಟ ಮಾಡಬಹುದು. ಪರಾಗ ಸ್ಪರ್ಶದಿಂದ ಬೆಳೆಗಳ ಅಧಿಕ ಇಳುವರಿ, ಜೈವಿಕ ಪರಿಸರ ನಿರ್ಮಾಣ ಮೊದಲಾದ ಪ್ರಯೋಜನಗಳು ಇವೆ ಎಂದು ತಿಳಿಸಿದರು.</p>.<p>ಬೆಂಗಳೂರಿನ ಎಂ.ಸಿ.ಕೆ.ಎಸ್. ಫೌಂಡೇಷನ್ನ ಲೋಕೇಶ, ತರಬೇತುದಾರ ಸುರೇಶ ಉಪಸ್ಥಿತರಿದ್ದರು.</p>.<p>ಸಹಾರ್ದ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಮಹಾಲಿಂಗ, ನಾಗಶೆಟ್ಟಿ ಘೋಡಂಪಳ್ಳಿ ನಿರೂಪಿಸಿದರು. ಅನಿಲ್ ಪರೆಶನ್ನೆ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>