<p><strong>ಮರಕಲ್(ಜನವಾಡ):</strong> ರೇಷ್ಮೆ ಕೃಷಿಯಿಂದ ರೈತರು ಉತ್ತಮ ಆದಾಯ ಪಡೆಯಬಹುದು ಎಂದು ರೇಷ್ಮೆ ಇಲಾಖೆಯ ಉಪ ನಿರ್ದೇಶಕ ರಾಜೇಂದ್ರಕುಮಾರ ಬಿ. ದೇವದುರ್ಗ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದ ರೇಷ್ಮೆ ಬೆಳೆಗಾರ ಮಹಮ್ಮದ್ ಸಲಾವೊದ್ದಿನ್ ಅವರ ಹಿಪ್ಪುನೇರಳೆ ತೋಟದಲ್ಲಿ ಗುರುವಾರ ನಡೆದ ಗುಂಪು ಚರ್ಚೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಎರಡು ಎಕರೆ ಹಿಪ್ಪುನೇರಳೆ ತೋಟ ಸ್ಥಾಪಿಸಿ, ವರ್ಷದಲ್ಲಿ 8 ರಿಂದ 10 ಬೆಳೆ ಬೆಳೆದು ₹6 ಲಕ್ಷದಿಂದ ₹7 ಲಕ್ಷ ಗಳಿಸಬಹುದು ಎಂದು ತಿಳಿಸಿದರು.</p>.<p>ರೇಷ್ಮೆ ಬೆಳೆಯಲು ಇಲಾಖೆಯಿಂದ ಸಿಗುವ ಪ್ರೋತ್ಸಾಹ ಧನ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ನೆರವಿನ ಬಗ್ಗೆಯೂ ಮಾಹಿತಿ ನೀಡಿದರು.</p>.<p>ರೇಷ್ಮೆ ಸಹಾಯಕ ನಿರ್ದೇಶಕ ಬಿ.ಜಿ. ಶೆಳಕೆ ಮಾತನಾಡಿ, ಬೇರೆ ಬೆಳೆಗಳಿಗೆ ಹೋಲಿಸಿದರೆ ರೇಷ್ಮೆ ಕಡಿಮೆ ಖರ್ಚಿನಲ್ಲಿ ಅಧಿಕ ಆದಾಯ ಪಡೆಯಬಹುದಾದ ಬೆಳೆಯಾಗಿದೆ. ಪ್ರಸ್ತುತ ರೇಷ್ಮೆ ದ್ವಿತಳಿ ಗೂಡಿಗೆ ಕೆ.ಜಿ.ಗೆ. ₹650 ರಿಂದ ₹750 ಧಾರಣೆ ಇದೆ ಎಂದು ತಿಳಿಸಿದರು.</p>.<p>ಕೇಂದ್ರ ರೇಷ್ಮೆ ಮಂಡಳಿಯ ಬೀದರ್ ಕಚೇರಿ ವಿಜ್ಞಾನಿಗಳಾದ ಡಾ. ಶ್ರೀನಿವಾಸ್, ನಿರಂಜನ್ ಮೂರ್ತಿ ಅವರು ಹಿಪ್ಪುನೇರಳೆ ತೋಟದ ನಿರ್ವಹಣೆ, ರೋಗ ನಿಯಂತ್ರಣ ಕುರಿತು ವಿವರಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಈಶ್ವರಮ್ಮ ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ರೇಷ್ಮೆ ಇಲಾಖೆಯ ಅಧಿಕಾರಿ ಕಿರಣ ಬಲ್ಲೂರೆ, ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಶಂಕರೆಪ್ಪ ಪಾರಾ, ಗ್ರಾಮ ಘಟಕದ ಅಧ್ಯಕ್ಷ ಬಸಪ್ಪ, ಮುಖಂಡ ಎಂ.ಡಿ.ಲೈಕೊದ್ದಿನ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಕಲ್(ಜನವಾಡ):</strong> ರೇಷ್ಮೆ ಕೃಷಿಯಿಂದ ರೈತರು ಉತ್ತಮ ಆದಾಯ ಪಡೆಯಬಹುದು ಎಂದು ರೇಷ್ಮೆ ಇಲಾಖೆಯ ಉಪ ನಿರ್ದೇಶಕ ರಾಜೇಂದ್ರಕುಮಾರ ಬಿ. ದೇವದುರ್ಗ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದ ರೇಷ್ಮೆ ಬೆಳೆಗಾರ ಮಹಮ್ಮದ್ ಸಲಾವೊದ್ದಿನ್ ಅವರ ಹಿಪ್ಪುನೇರಳೆ ತೋಟದಲ್ಲಿ ಗುರುವಾರ ನಡೆದ ಗುಂಪು ಚರ್ಚೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಎರಡು ಎಕರೆ ಹಿಪ್ಪುನೇರಳೆ ತೋಟ ಸ್ಥಾಪಿಸಿ, ವರ್ಷದಲ್ಲಿ 8 ರಿಂದ 10 ಬೆಳೆ ಬೆಳೆದು ₹6 ಲಕ್ಷದಿಂದ ₹7 ಲಕ್ಷ ಗಳಿಸಬಹುದು ಎಂದು ತಿಳಿಸಿದರು.</p>.<p>ರೇಷ್ಮೆ ಬೆಳೆಯಲು ಇಲಾಖೆಯಿಂದ ಸಿಗುವ ಪ್ರೋತ್ಸಾಹ ಧನ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ನೆರವಿನ ಬಗ್ಗೆಯೂ ಮಾಹಿತಿ ನೀಡಿದರು.</p>.<p>ರೇಷ್ಮೆ ಸಹಾಯಕ ನಿರ್ದೇಶಕ ಬಿ.ಜಿ. ಶೆಳಕೆ ಮಾತನಾಡಿ, ಬೇರೆ ಬೆಳೆಗಳಿಗೆ ಹೋಲಿಸಿದರೆ ರೇಷ್ಮೆ ಕಡಿಮೆ ಖರ್ಚಿನಲ್ಲಿ ಅಧಿಕ ಆದಾಯ ಪಡೆಯಬಹುದಾದ ಬೆಳೆಯಾಗಿದೆ. ಪ್ರಸ್ತುತ ರೇಷ್ಮೆ ದ್ವಿತಳಿ ಗೂಡಿಗೆ ಕೆ.ಜಿ.ಗೆ. ₹650 ರಿಂದ ₹750 ಧಾರಣೆ ಇದೆ ಎಂದು ತಿಳಿಸಿದರು.</p>.<p>ಕೇಂದ್ರ ರೇಷ್ಮೆ ಮಂಡಳಿಯ ಬೀದರ್ ಕಚೇರಿ ವಿಜ್ಞಾನಿಗಳಾದ ಡಾ. ಶ್ರೀನಿವಾಸ್, ನಿರಂಜನ್ ಮೂರ್ತಿ ಅವರು ಹಿಪ್ಪುನೇರಳೆ ತೋಟದ ನಿರ್ವಹಣೆ, ರೋಗ ನಿಯಂತ್ರಣ ಕುರಿತು ವಿವರಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಈಶ್ವರಮ್ಮ ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ರೇಷ್ಮೆ ಇಲಾಖೆಯ ಅಧಿಕಾರಿ ಕಿರಣ ಬಲ್ಲೂರೆ, ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಶಂಕರೆಪ್ಪ ಪಾರಾ, ಗ್ರಾಮ ಘಟಕದ ಅಧ್ಯಕ್ಷ ಬಸಪ್ಪ, ಮುಖಂಡ ಎಂ.ಡಿ.ಲೈಕೊದ್ದಿನ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>