<p><strong>ಬೀದರ್: </strong>ಜಿಲ್ಲೆಯಲ್ಲಿ ಮಂಗಳವಾರ ಉತ್ತಮ ಮಳೆ ಸುರಿಯಿತು.</p>.<p>ಬೀದರ್, ಔರಾದ್, ಬಸವಕಲ್ಯಾಣ, ಹುಮನಾಬಾದ್, ಕಮಲನಗರ, ಭಾಲ್ಕಿ, ಚಿಟಗುಪ್ಪ ತಾಲ್ಲೂಕುಗಳಲ್ಲಿ ಮಳೆ ಸುರಿಯಿತು.</p>.<p>ಮಧ್ಯಾಹ್ನ ಕೆಲ ಹೊತ್ತು ಬಿರುಸಿನಿಂದ ಸುರಿದ ಮಳೆ ಸಂಜೆವರೆಗೂ ಜಿಟಿ ಜಿಟಿಯಾಗಿ ಮುಂದುವರಿಯಿತು.</p>.<p>ನಗರದಲ್ಲಿ ಬೆಳಿಗ್ಗೆಯಿಂದಲೇ ದಗೆ ಇತ್ತು. ಮಧ್ಯಾಹ್ನ ವಾತಾವರಣದಲ್ಲಿ ಬದಲಾವಣೆಯಾಯಿತು. ಆಕಾಶದಲ್ಲಿ ದಟ್ಟ ಮೋಡಗಳು ಆವರಿಸಿಕೊಂಡು ಮಳೆ ಸುರಿಯಲಾರಂಭಿಸಿತು. ಸುಮಾರು 45 ನಿಮಿಷಗಳ ಕಾಲ ಉತ್ತಮ ಮಳೆ ಸುರಿಯಿತು.</p>.<p>ನಗರದ ಹಾರೂರಗೇರಿ ಕಮಾನ್, ರೋಟರಿ ವೃತ್ತ, ಬೊಮ್ಮಗೊಂಡೇಶ್ವರ ವೃತ್ತದಿಂದ ಅಶೋಕ ಹೋಟೆಲ್ಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿರುವ ರೈಲ್ವೆ ಕೆಳ ಸೇತುವೆ, ಬಸವೇಶ್ವರ ವೃತ್ತ, ಜನವಾಡ ರಸ್ತೆ, ಚಿದ್ರಿ ರಸ್ತೆ, ಶಿವನಗರ ರಸ್ತೆ ಮತ್ತಿತರ ಕಡೆಗಳಲ್ಲಿ ರಸ್ತೆಗಳ ಮೇಲೆ ನೀರು ಹರಿಯಿತು.</p>.<p>ಅನೇಕ ಬೈಕ್ ಸವಾರರು ಮಳೆಯಲ್ಲಿ ನೆನೆಸಿಕೊಂಡೇ ಮನೆಗಳಿಗೆ ತೆರಳಿದರೆ, ಚಿಣ್ಣರು ತೊಯ್ಯಿಸಿಕೊಂಡು ಸಂಭ್ರಮಿಸಿದರು.</p>.<p class="Subhead">ಜನ ಜೀವನ ಅಸ್ತವ್ಯಸ್ತ: ಮಳೆಯಿಂದಾಗಿ ಮಧ್ಯಾಹ್ನ ಹಾಗೂ ಸಂಜೆ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.</p>.<p class="Subhead">ಅಂಗಡಿ ಮುಂಗಟ್ಟುಗಳಲ್ಲಿ ನಿರೀಕ್ಷಿತ ವ್ಯಾಪಾರ ಇರಲಿಲ್ಲ. ಜನ, ವಾಹನಗಳ ಸಂಚಾರವೂ ವಿರಳ ಆಗಿತ್ತು.</p>.<p class="Subhead">ಹರ್ಷ: ಮುಂಗಾರು ಹಂಗಾಮಿನಲ್ಲಿ ಆಗಾಗ ಉತ್ತಮ ಮಳೆ ಸುರಿಯುತ್ತಿರುವುದು ರೈತರಲ್ಲಿ ಹರ್ಷ ಉಂಟು ಮಾಡಿದೆ.</p>.<p class="Subhead">ಕೋವಿಡ್ ಸೋಂಕಿನ ಕಾರಣ ವಿಧಿಸಲಾದ ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟದಲ್ಲಿರುವ ರೈತರು ಮುಂಗಾರು ಹಂಗಾಮಿನ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.<br />ಅಂದುಕೊಂಡಂತೆ ಉತ್ತಮ ಮಳೆ ಸುರಿದರೆ ಚೆನ್ನಾಗಿ ಬೆಳೆ ಬರಲಿದೆ. ರೈತರಿಗೆ ಒಂದಿಷ್ಟು ಆರ್ಥಿಕ ಅನುಕೂಲ ಆಗಲಿದೆ ಎಂದು ಹೇಳುತ್ತಾರೆ ಹಲಬರ್ಗಾದ ಯುವ ರೈತ ರಾಜಕುಮಾರ ಚಲುವಾ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಜಿಲ್ಲೆಯಲ್ಲಿ ಮಂಗಳವಾರ ಉತ್ತಮ ಮಳೆ ಸುರಿಯಿತು.</p>.<p>ಬೀದರ್, ಔರಾದ್, ಬಸವಕಲ್ಯಾಣ, ಹುಮನಾಬಾದ್, ಕಮಲನಗರ, ಭಾಲ್ಕಿ, ಚಿಟಗುಪ್ಪ ತಾಲ್ಲೂಕುಗಳಲ್ಲಿ ಮಳೆ ಸುರಿಯಿತು.</p>.<p>ಮಧ್ಯಾಹ್ನ ಕೆಲ ಹೊತ್ತು ಬಿರುಸಿನಿಂದ ಸುರಿದ ಮಳೆ ಸಂಜೆವರೆಗೂ ಜಿಟಿ ಜಿಟಿಯಾಗಿ ಮುಂದುವರಿಯಿತು.</p>.<p>ನಗರದಲ್ಲಿ ಬೆಳಿಗ್ಗೆಯಿಂದಲೇ ದಗೆ ಇತ್ತು. ಮಧ್ಯಾಹ್ನ ವಾತಾವರಣದಲ್ಲಿ ಬದಲಾವಣೆಯಾಯಿತು. ಆಕಾಶದಲ್ಲಿ ದಟ್ಟ ಮೋಡಗಳು ಆವರಿಸಿಕೊಂಡು ಮಳೆ ಸುರಿಯಲಾರಂಭಿಸಿತು. ಸುಮಾರು 45 ನಿಮಿಷಗಳ ಕಾಲ ಉತ್ತಮ ಮಳೆ ಸುರಿಯಿತು.</p>.<p>ನಗರದ ಹಾರೂರಗೇರಿ ಕಮಾನ್, ರೋಟರಿ ವೃತ್ತ, ಬೊಮ್ಮಗೊಂಡೇಶ್ವರ ವೃತ್ತದಿಂದ ಅಶೋಕ ಹೋಟೆಲ್ಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿರುವ ರೈಲ್ವೆ ಕೆಳ ಸೇತುವೆ, ಬಸವೇಶ್ವರ ವೃತ್ತ, ಜನವಾಡ ರಸ್ತೆ, ಚಿದ್ರಿ ರಸ್ತೆ, ಶಿವನಗರ ರಸ್ತೆ ಮತ್ತಿತರ ಕಡೆಗಳಲ್ಲಿ ರಸ್ತೆಗಳ ಮೇಲೆ ನೀರು ಹರಿಯಿತು.</p>.<p>ಅನೇಕ ಬೈಕ್ ಸವಾರರು ಮಳೆಯಲ್ಲಿ ನೆನೆಸಿಕೊಂಡೇ ಮನೆಗಳಿಗೆ ತೆರಳಿದರೆ, ಚಿಣ್ಣರು ತೊಯ್ಯಿಸಿಕೊಂಡು ಸಂಭ್ರಮಿಸಿದರು.</p>.<p class="Subhead">ಜನ ಜೀವನ ಅಸ್ತವ್ಯಸ್ತ: ಮಳೆಯಿಂದಾಗಿ ಮಧ್ಯಾಹ್ನ ಹಾಗೂ ಸಂಜೆ ನಗರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.</p>.<p class="Subhead">ಅಂಗಡಿ ಮುಂಗಟ್ಟುಗಳಲ್ಲಿ ನಿರೀಕ್ಷಿತ ವ್ಯಾಪಾರ ಇರಲಿಲ್ಲ. ಜನ, ವಾಹನಗಳ ಸಂಚಾರವೂ ವಿರಳ ಆಗಿತ್ತು.</p>.<p class="Subhead">ಹರ್ಷ: ಮುಂಗಾರು ಹಂಗಾಮಿನಲ್ಲಿ ಆಗಾಗ ಉತ್ತಮ ಮಳೆ ಸುರಿಯುತ್ತಿರುವುದು ರೈತರಲ್ಲಿ ಹರ್ಷ ಉಂಟು ಮಾಡಿದೆ.</p>.<p class="Subhead">ಕೋವಿಡ್ ಸೋಂಕಿನ ಕಾರಣ ವಿಧಿಸಲಾದ ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟದಲ್ಲಿರುವ ರೈತರು ಮುಂಗಾರು ಹಂಗಾಮಿನ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.<br />ಅಂದುಕೊಂಡಂತೆ ಉತ್ತಮ ಮಳೆ ಸುರಿದರೆ ಚೆನ್ನಾಗಿ ಬೆಳೆ ಬರಲಿದೆ. ರೈತರಿಗೆ ಒಂದಿಷ್ಟು ಆರ್ಥಿಕ ಅನುಕೂಲ ಆಗಲಿದೆ ಎಂದು ಹೇಳುತ್ತಾರೆ ಹಲಬರ್ಗಾದ ಯುವ ರೈತ ರಾಜಕುಮಾರ ಚಲುವಾ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>