ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಗ್ರಾಮೀಣ ಭಾಗದ ಬಡ, ಪ್ರತಿಭಾವಂತ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದೇ ನಮ್ಮ ಶಾಲೆಯ ಧ್ಯೇಯವಾಗಿದೆ. ಶಾಲೆ ತೆರೆಯಲು, ಕಟ್ಟಡ ನಿರ್ಮಿಸಲು ಸ್ಥಳ, ಹಣವನ್ನು ನೀಡಿರುವ ವಿ.ಕೆ.ಪಾಟೀಲ, ನೀಲಮ್ಮ ಪಾಟೀಲ ಸರ್ವರಿಗೂ ಮಾದರಿ ಆಗಿದ್ದಾರೆ ಎಂದು ಅವರು ಹೇಳಿದರು.