ಬೀದರ್: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಗಳಿಗೆ ಜುಲೈ 11 ರಂದು ಚುನಾವಣೆ ನಡೆಯಲಿದೆ.
ಜುಲೈ 1 ರಿಂದ ನಾಮಪತ್ರ ವಿತರಣೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಜುಲೈ 4 ಕೊನೆಯ ದಿನವಾಗಿದೆ. ಅದೇ ದಿನ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ಜುಲೈ 6 ಕಡೆಯ ದಿನವಾಗಿದೆ.
ಜುಲೈ 11 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆ ವರೆಗೆ ಪ್ರತಾಪನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಮತದಾನ ನಡೆಯಲಿದೆ. ಸಂಜೆ 4.30 ರಿಂದ ಮತ ಎಣಿಕೆ ಆರಂಭವಾಗಲಿದೆ ಎಂದು ಚುನಾವಣಾಧಿಕಾರಿ ವೀರಪ್ಪ ಪಸಾರ್ಗಿ ತಿಳಿಸಿದ್ದಾರೆ.