<p>ಔರಾದ್: ನೆರೆಯ ತೆಲಂಗಾಣ ರಾಜ್ಯದ ಗಡಿಗೆ ಹೊಂದಿಕೊಂಡಿರುವ ತಾಲ್ಲೂಕಿನ ಚಿಂತಾಕಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಉತ್ತಮ ಆರೋಗ್ಯ ಸೇವೆಯಿಂದ ಗಮನ ಸೆಳೆದಿದೆ.</p>.<p>ಖಾಸಗಿ ಆಸ್ಪತ್ರೆಗಳಿಗೆ ಸರಿ ಸಮಾನವಾದ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಹೊಂದಿದೆ. ಇಲ್ಲಿಯ ತುರ್ತು ನಿಗಾ ಘಟಕದಲ್ಲಿ ಸುಧಾರಿತ ಚಿಕಿತ್ಸಾ ಉಪಕರಣಗಳ ಜೊತೆಗೆ ನುರಿತ ವೈದ್ಯ ಸಿಬ್ಬಂದಿ ಇದ್ದಾರೆ.</p>.<p>ಹಾವು ಕಡಿತ, ವಿಷ ಸೇವನೆ, ಅಪಘಾತದಂತಹ ಸಂದರ್ಭದಲ್ಲಿ ತುರ್ತು ಚಿಕಿತ್ಸಾ ಸೇವೆಯ ವ್ಯವಸ್ಥೆ ಇದೆ. ವಾರಕ್ಕೆ ಎರಡು ದಿನ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಯುತ್ತದೆ. 25 ರಿಂದ 30 ಜನ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಾರೆ.</p>.<p>ಆರು ಹಾಸಿಗೆಯುಳ್ಳ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ಆರು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ನಿತ್ಯ 60ಕ್ಕೂ ಹೆಚ್ಚು ಹೊರ ರೋಗಿಗಳು ಆರೋಗ್ಯ ತಪಾಸಣೆ ಮಾಡಿಕೊಳ್ಳುತ್ತಾರೆ. 8 ರಿಂದ 10 ಮಂದಿ ಒಳ ರೋಗಿಗಳಾಗಿ ಚಿಕಿತ್ಸೆ ನೀಡಲಾಗುತ್ತದೆ.</p>.<p>ಮಹಿಳೆ ಮತ್ತು ಮಕ್ಕಳಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಹೆರಿಗೆಯಾದವರಿಗೆ ಮತ್ತು ಶಿಶು ಆರೈಕೆಗೆ ಆಧುನಿಕ ಸೌಲಭ್ಯವಿದೆ. ತುರ್ತು ಪರಿಸ್ಥಿತಿಗೆ ಅಗತ್ಯವಾದ ಹೈಟೆಕ್ ಆ್ಯಂಬುಲೆನ್ಸ್ ವ್ಯವಸ್ಥೆಯೂ ಇದೆ. ಆಮ್ಲಜನಕ ಸೇರಿದಂತೆ ಇತರೆ ತುರ್ತು ಚಿಕಿತ್ಸಾ ಸೌಲಭ್ಯ ಹೊಂದಿದೆ.</p>.<p>‘ಆಸ್ಪತ್ರೆಯ ಸ್ವಚ್ಛ ಪರಿಸರ ಮತ್ತು ಸಿಬ್ಬಂದಿ ಕರ್ತವ್ಯನಿಷ್ಠೆ ಗಮನ ಸೆಳೆಯುತ್ತದೆ. ಗ್ರಾಮೀಣ ಪ್ರದೇಶದ ಆಸ್ಪತ್ರೆಯು ರೋಗಿಗಳಿಗೆ ಗುಣಮಟ್ಟದ ಸೇವೆ ನೀಡುತ್ತಿರುವುದನ್ನು ಪರಿಗಣಿಸಿ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಗುಣಮಟ್ಟದ ಮೌಲ್ಯಮಾಪನ ಪ್ರಮಾಣ ಪತ್ರ ಘೋಷಣೆ ಮಾಡಿದೆ. ಈ ಪ್ರಮಾಣ ಪತ್ರ ಪಡೆಯಲು ಅರ್ಹತೆ ಪಡೆದ ಜಿಲ್ಲೆಯ ಮೂರು ಪ್ರಾಥಮಿಕ ಕೇಂದ್ರಗಳ ಪೈಕಿ ಚಿಂತಾಕಿ ಕೇಂದ್ರ ಮೊದಲ ಸ್ಥಾನದಲ್ಲಿದೆ. ಇದು ತಾಲ್ಲೂಕಿಗೆ ಹೆಮ್ಮೆಯ ಸಂಗತಿ’ ಎಂದು ಸ್ಥಳೀಯರು ಹೇಳುತ್ತಾರೆ.</p>.<p>‘ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಸೇವೆ ನೀಡುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಗುರುತಿಸಲು ತಜ್ಞರ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ. ಆ ಸಮಿತಿಯವರು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು, ರೋಗಿಗಳು, ಸ್ಥಳೀಯರನ್ನು ಮಾತನಾಡಿಸಿ ಮಾಹಿತಿ ಕಲೆ ಹಾಕುತ್ತಾರೆ. ಆ ಮಾಹಿತಿ ಆಧಾರದ ಮೇಲೆ ಪ್ರಮಾಣ ಪತ್ರ ನೀಡಲಾಗುತ್ತದೆ. ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರವು ರಾಜ್ಯದ ಎರಡನೇ ಹಾಗೂ ಜಿಲ್ಲೆಯ ಪ್ರಥಮ ಗುಣಮಟ್ಟದ ಆಸ್ಪತ್ರೆ ಎಂದು ಗುರುತಿಸಿಕೊಂಡಿದೆ’ ಎನ್ನುತ್ತಾರೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗಾಯತ್ರಿ.</p>.<p>*ಕೇಂದ್ರದ ಮೌಲ್ಯಮಾಪನದಲ್ಲಿ ಚಿಂತಾಕಿ ಪ್ರಾಥಮಿಕ ಆರೋಗ್ಯ ಕೇಂದ್ರವು ಪ್ರಥಮ ಸ್ಥಾನ ಪಡೆದಿದೆ. ಇದರ ಶ್ರೇಯಸ್ಸು ಆರೋಗ್ಯ ಸಿಬ್ಬಂದಿಗೆ ಸಲ್ಲಬೇಕು</p>.<p>ಡಾ. ಪ್ರವೀಣ ಮಾಸಿಮಾಡೆ, ಔರಾದ್ ತಾಲ್ಲೂಕು ಆರೋಗ್ಯಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ನೆರೆಯ ತೆಲಂಗಾಣ ರಾಜ್ಯದ ಗಡಿಗೆ ಹೊಂದಿಕೊಂಡಿರುವ ತಾಲ್ಲೂಕಿನ ಚಿಂತಾಕಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಉತ್ತಮ ಆರೋಗ್ಯ ಸೇವೆಯಿಂದ ಗಮನ ಸೆಳೆದಿದೆ.</p>.<p>ಖಾಸಗಿ ಆಸ್ಪತ್ರೆಗಳಿಗೆ ಸರಿ ಸಮಾನವಾದ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಹೊಂದಿದೆ. ಇಲ್ಲಿಯ ತುರ್ತು ನಿಗಾ ಘಟಕದಲ್ಲಿ ಸುಧಾರಿತ ಚಿಕಿತ್ಸಾ ಉಪಕರಣಗಳ ಜೊತೆಗೆ ನುರಿತ ವೈದ್ಯ ಸಿಬ್ಬಂದಿ ಇದ್ದಾರೆ.</p>.<p>ಹಾವು ಕಡಿತ, ವಿಷ ಸೇವನೆ, ಅಪಘಾತದಂತಹ ಸಂದರ್ಭದಲ್ಲಿ ತುರ್ತು ಚಿಕಿತ್ಸಾ ಸೇವೆಯ ವ್ಯವಸ್ಥೆ ಇದೆ. ವಾರಕ್ಕೆ ಎರಡು ದಿನ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಯುತ್ತದೆ. 25 ರಿಂದ 30 ಜನ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಾರೆ.</p>.<p>ಆರು ಹಾಸಿಗೆಯುಳ್ಳ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ ಆರು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ನಿತ್ಯ 60ಕ್ಕೂ ಹೆಚ್ಚು ಹೊರ ರೋಗಿಗಳು ಆರೋಗ್ಯ ತಪಾಸಣೆ ಮಾಡಿಕೊಳ್ಳುತ್ತಾರೆ. 8 ರಿಂದ 10 ಮಂದಿ ಒಳ ರೋಗಿಗಳಾಗಿ ಚಿಕಿತ್ಸೆ ನೀಡಲಾಗುತ್ತದೆ.</p>.<p>ಮಹಿಳೆ ಮತ್ತು ಮಕ್ಕಳಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗಿದೆ. ಹೆರಿಗೆಯಾದವರಿಗೆ ಮತ್ತು ಶಿಶು ಆರೈಕೆಗೆ ಆಧುನಿಕ ಸೌಲಭ್ಯವಿದೆ. ತುರ್ತು ಪರಿಸ್ಥಿತಿಗೆ ಅಗತ್ಯವಾದ ಹೈಟೆಕ್ ಆ್ಯಂಬುಲೆನ್ಸ್ ವ್ಯವಸ್ಥೆಯೂ ಇದೆ. ಆಮ್ಲಜನಕ ಸೇರಿದಂತೆ ಇತರೆ ತುರ್ತು ಚಿಕಿತ್ಸಾ ಸೌಲಭ್ಯ ಹೊಂದಿದೆ.</p>.<p>‘ಆಸ್ಪತ್ರೆಯ ಸ್ವಚ್ಛ ಪರಿಸರ ಮತ್ತು ಸಿಬ್ಬಂದಿ ಕರ್ತವ್ಯನಿಷ್ಠೆ ಗಮನ ಸೆಳೆಯುತ್ತದೆ. ಗ್ರಾಮೀಣ ಪ್ರದೇಶದ ಆಸ್ಪತ್ರೆಯು ರೋಗಿಗಳಿಗೆ ಗುಣಮಟ್ಟದ ಸೇವೆ ನೀಡುತ್ತಿರುವುದನ್ನು ಪರಿಗಣಿಸಿ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಗುಣಮಟ್ಟದ ಮೌಲ್ಯಮಾಪನ ಪ್ರಮಾಣ ಪತ್ರ ಘೋಷಣೆ ಮಾಡಿದೆ. ಈ ಪ್ರಮಾಣ ಪತ್ರ ಪಡೆಯಲು ಅರ್ಹತೆ ಪಡೆದ ಜಿಲ್ಲೆಯ ಮೂರು ಪ್ರಾಥಮಿಕ ಕೇಂದ್ರಗಳ ಪೈಕಿ ಚಿಂತಾಕಿ ಕೇಂದ್ರ ಮೊದಲ ಸ್ಥಾನದಲ್ಲಿದೆ. ಇದು ತಾಲ್ಲೂಕಿಗೆ ಹೆಮ್ಮೆಯ ಸಂಗತಿ’ ಎಂದು ಸ್ಥಳೀಯರು ಹೇಳುತ್ತಾರೆ.</p>.<p>‘ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಸೇವೆ ನೀಡುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಗುರುತಿಸಲು ತಜ್ಞರ ಸಮಿತಿಯನ್ನು ಕೇಂದ್ರ ಸರ್ಕಾರ ರಚಿಸಿದೆ. ಆ ಸಮಿತಿಯವರು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರು, ರೋಗಿಗಳು, ಸ್ಥಳೀಯರನ್ನು ಮಾತನಾಡಿಸಿ ಮಾಹಿತಿ ಕಲೆ ಹಾಕುತ್ತಾರೆ. ಆ ಮಾಹಿತಿ ಆಧಾರದ ಮೇಲೆ ಪ್ರಮಾಣ ಪತ್ರ ನೀಡಲಾಗುತ್ತದೆ. ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರವು ರಾಜ್ಯದ ಎರಡನೇ ಹಾಗೂ ಜಿಲ್ಲೆಯ ಪ್ರಥಮ ಗುಣಮಟ್ಟದ ಆಸ್ಪತ್ರೆ ಎಂದು ಗುರುತಿಸಿಕೊಂಡಿದೆ’ ಎನ್ನುತ್ತಾರೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗಾಯತ್ರಿ.</p>.<p>*ಕೇಂದ್ರದ ಮೌಲ್ಯಮಾಪನದಲ್ಲಿ ಚಿಂತಾಕಿ ಪ್ರಾಥಮಿಕ ಆರೋಗ್ಯ ಕೇಂದ್ರವು ಪ್ರಥಮ ಸ್ಥಾನ ಪಡೆದಿದೆ. ಇದರ ಶ್ರೇಯಸ್ಸು ಆರೋಗ್ಯ ಸಿಬ್ಬಂದಿಗೆ ಸಲ್ಲಬೇಕು</p>.<p>ಡಾ. ಪ್ರವೀಣ ಮಾಸಿಮಾಡೆ, ಔರಾದ್ ತಾಲ್ಲೂಕು ಆರೋಗ್ಯಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>