ಬೀದರ್: ‘ಹುಬ್ಬಳ್ಳಿಯ ಬಿ.ವಿ.ಬಿ ಕಾಲೇಜಿನ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಘಟನೆಯಿಂದ ಪಾಲಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಉಂಟಾಗಿರುವುದು ನಿಜ. ಸರ್ಕಾರವು ವಿದ್ಯಾರ್ಥಿಗಳು, ಅದರಲ್ಲೂ ವಿದ್ಯಾರ್ಥಿನಿಯರ ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.