ಸದ್ಯ ಪಂಚಾಯಿತಿ ಕಚೇರಿ ಊರ ಹೊರಗೆ ಇರುವುದರಿಂದ ಸಾರ್ವಜನಿಕರಿಗೆ ಮನೆ, ನಲ್ಲಿ ಕರ ಪಾವತಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಜಾಬ್ ಕಾರ್ಡ್, ಸರ್ಕಾರದ ಯೋಜನೆಗಳು ಸೇರಿದಂತೆ ವಿವಿಧ ಕೆಲಸ ಕಾರ್ಯಗಳಿಗೆ ಅನಾನುಕೂಲವಾಗುತ್ತಿದೆ. ಹಳೆಯ ಕಟ್ಟಡ ನೆಲಸಮಗೊಳಿಸಿ, ಅದೇ ಜಾಗದಲ್ಲಿ ಹೊಸ ಕಟ್ಟಡ ನಿರ್ಮಿಸಿದರೆ ಒಳಿತು ಎನ್ನುತ್ತಾರೆ ಗ್ರಾಮದ ಕಲ್ಲಪ್ಪ ಹಾಸಗೊಂಡ.