ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಔರಾದ್: ಪದವೀಧರ ಶ್ರೀನಿವಾಸಗೆ ಅಧ್ಯಕ್ಷ ಪಟ್ಟ

ಧೂಪತಮಹಾಗಾಂವ್ ಪಂಚಾಯಿತಿಗೆ ಅವಿರೋಧ ಆಯ್ಕೆ
Last Updated 5 ಫೆಬ್ರುವರಿ 2021, 5:29 IST
ಅಕ್ಷರ ಗಾತ್ರ

ಔರಾದ್: ತಾಲ್ಲೂಕಿನ ಧೂಪತಮಹಾ ಗಾಂವ್ ಗ್ರಾಮ ಪಂಚಾಯಿತಿಯಲ್ಲಿ ಡಬಲ್ ಡಿಗ್ರಿ ಪಡೆದ ಸದಸ್ಯರೊಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ನಡೆದ ಚುನಾವಣೆಯಲ್ಲಿ ಶ್ರೀನಿವಾಸ ಗಣಪತರಾವ ಚೊನ್ನೆಕೇರೆ ಅಧ್ಯಕ್ಷರಾಗಿ ಹಾಗೂ ವಿದ್ಯಾವತಿ ಗಣಪತಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀನಿವಾಸ ಅವರು ಧಾರವಾಡ ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ ಹಾಗೂ ಬೆಂಗಳೂರಿನ ಎಂ.ಎಸ್. ರಾಮಯ್ಯ ಕಾಲೇಜಿನಿಂದ ಎಂಬಿಎ ಪದವಿ ಪಡೆದಿದ್ದಾರೆ. ಬೆಂಗಳೂರಿನ ಸಕ್ಷಮ ಕಂಪನಿಯಲ್ಲಿ 10 ವರ್ಷಗಳ ಕಾಲ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಇದೀಗ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಜನ ಸೇವೆಯಲ್ಲಿ ತೊಡಗಿದ್ದು ಗ್ರಾಮಸ್ಥರಲ್ಲಿ ಸಂತಸ ಮೂಡಿದೆ.

‘ನಾನು ನಗರ ಪ್ರದೇಶದಲ್ಲಿ ಓದು ಹಾಗೂ ಕೆಲಸ ಮಾಡಿದರೂ ಸಹ ಗ್ರಾಮದ ಜತೆ ಆತ್ಮೀಯ ಸಂಬಂಧ ಹೊಂದಿದ್ದೇನೆ. ಜಾತ್ರೆ, ಹಬ್ಬ ಹರಿದಿನಗಳಲ್ಲಿ ಊರಿಗೆ ಬರುವುದು ಮರೆತಿರಲಿಲ್ಲ. ನನ್ನ ಊರು ಹಾಗೂ ನನ್ನ ಜನ ಬೆಳೆಯಬೇಕು ಎಂಬುದು ನನ್ನ ಬಯಕೆ. ಈ ಕಾರಣ ತಿಂಗಳಿಗೆ ₹60 ಸಾವಿರ ವೇತನ ಇದ್ದರೂ ಅದನ್ನು ಬಿಟ್ಟು ಈಗ ಊರಿಗೆ ಬಂದಿದ್ದೇನೆ. ಊರಿನ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು. ಜನರಿಗೆ ಮೂಲ ಸೌಲಭ್ಯ ದಕ್ಕಬೇಕು. ಯುವಕರು ಸ್ವಾವಲಂಬಿಯಾಗಬೇಕು ಎಂಬುದು ನನ್ನ ಉದ್ದೇಶ. ಜನರು ಹಾಗೂ ಅಧಿಕಾರಿಗಳು ಸಹಕಾರ ನೀಡಿದರೆ ನಮ್ಮ ಪಂಚಾಯಿತಿ ರಾಜ್ಯದಲ್ಲೇ ಮಾದರಿಯಾಗಿ ಮಾಡುವುದಾಗಿ’ ನೂತನ ಅಧ್ಯಕ್ಷ ಶ್ರೀನಿವಾಸ ವಿಶ್ವಾಸ ವ್ಯಕ್ತಪಡಿಸುತ್ತಾರೆ.

‘ಎರಡೆರಡು ಪದವಿ ಪಡೆದ ಯುವ ಉತ್ಸಾಹಿ ಈ ಗ್ರಾಮ ಪಂಚಾತಿ ಅಧ್ಯಕ್ಷರಾಗಿರುವುದು ಗ್ರಾಮದ ಸೌಭಾಗ್ಯ. ಇದರಿಂದ ಅಧಿಕಾರಿಗಳಿಗೂ ಹೆಚ್ಚು ಕೆಲಸ ಮಾಡಲು ಪ್ರೇರಣೆ ಸಿಗುತ್ತದೆ’ ಎಂದು ಪಿಡಿಒ ಶಿವಾನಂದ ಔರಾದೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT