‘ನಾನು ನಗರ ಪ್ರದೇಶದಲ್ಲಿ ಓದು ಹಾಗೂ ಕೆಲಸ ಮಾಡಿದರೂ ಸಹ ಗ್ರಾಮದ ಜತೆ ಆತ್ಮೀಯ ಸಂಬಂಧ ಹೊಂದಿದ್ದೇನೆ. ಜಾತ್ರೆ, ಹಬ್ಬ ಹರಿದಿನಗಳಲ್ಲಿ ಊರಿಗೆ ಬರುವುದು ಮರೆತಿರಲಿಲ್ಲ. ನನ್ನ ಊರು ಹಾಗೂ ನನ್ನ ಜನ ಬೆಳೆಯಬೇಕು ಎಂಬುದು ನನ್ನ ಬಯಕೆ. ಈ ಕಾರಣ ತಿಂಗಳಿಗೆ ₹60 ಸಾವಿರ ವೇತನ ಇದ್ದರೂ ಅದನ್ನು ಬಿಟ್ಟು ಈಗ ಊರಿಗೆ ಬಂದಿದ್ದೇನೆ. ಊರಿನ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು. ಜನರಿಗೆ ಮೂಲ ಸೌಲಭ್ಯ ದಕ್ಕಬೇಕು. ಯುವಕರು ಸ್ವಾವಲಂಬಿಯಾಗಬೇಕು ಎಂಬುದು ನನ್ನ ಉದ್ದೇಶ. ಜನರು ಹಾಗೂ ಅಧಿಕಾರಿಗಳು ಸಹಕಾರ ನೀಡಿದರೆ ನಮ್ಮ ಪಂಚಾಯಿತಿ ರಾಜ್ಯದಲ್ಲೇ ಮಾದರಿಯಾಗಿ ಮಾಡುವುದಾಗಿ’ ನೂತನ ಅಧ್ಯಕ್ಷ ಶ್ರೀನಿವಾಸ ವಿಶ್ವಾಸ ವ್ಯಕ್ತಪಡಿಸುತ್ತಾರೆ.